ಕೇರಳದಲ್ಲಿ ಕಾರಿಗೆ ಬೆಂಕಿ ಹಚ್ಚಿದ ನಕ್ಸಲರು: ಸರ್ಕಾರದ ವಿರುದ್ಧ ಆಕ್ರೋಶ

ಸೋಮವಾರ, 22 ಡಿಸೆಂಬರ್ 2014 (10:55 IST)
ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯಾಧಿಕಾರಿಗಳ ಕಾರಿಗೆ ಕಾಡಿನಲ್ಲಿನ ನಕ್ಸಲರು ಬೆಂಕಿ ಹಚ್ಚುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಕೇರಳ ರಾಜ್ಯದ ಪಲಕ್ಕಾಡ್ ಎಂಬ ಅರಣ್ಯ ಪ್ರದೇಶದಲ್ಲಿ ನಡೆದಿದೆ. 
 
ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅರಣ್ಯಾಧಿಕಾರಿಗಳು, ರಾಜ್ಯ ಸರ್ಕಾರ ಆದಿವಾಸಿಗಳನ್ನು ನಿರ್ಲಕ್ಷಿಸುತ್ತಿದ್ದು, ಅವರಿಗೆ ಪ್ರತ್ಯೇಕವಾಗಿ ಪ್ಯಾಕೇಜನ್ನು ಘೋಷಿಸಬೇಕೆಂದು ನಕ್ಸಲರು ಒತ್ತಾಯಿಸುತ್ತಿದ್ದು, ಈ ಕೃತ್ಯವನ್ನು ಎಸಗಿದ್ದಾರೆ ಎಂದಿದ್ದಾರೆ. 
 
ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲವಾದರೂ ಸರ್ಕಾರಕ್ಕೆ ಮೊದಲ ಬಾರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ ಎನ್ನಲಾಗಿದೆ. 

ವೆಬ್ದುನಿಯಾವನ್ನು ಓದಿ