ಕಾಶಿ ಶಿವನ ಸನ್ನಿಧಾನದಲ್ಲಿ ಮಗನ ಮದುವೆ ಆಮಂತ್ರಣಕ್ಕೆ ಪೂಜೆ ಸಲ್ಲಿಸಿದ ನೀತಾ ಅಂಬಾನಿ

Sampriya

ಶುಕ್ರವಾರ, 28 ಜೂನ್ 2024 (14:56 IST)
Photo Courtesy X
ವಾರಣಾಸಿ: ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ವಿವಾಹದ ಮೊದಲ ಆಮಂತ್ರಣವನ್ನು ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ, ನೀತಾ ಅಂಬಾನಿ ಅವರು ಕಾಶಿ ವಿಶ್ವನಾಥಕ್ಕೆ ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡಿಸಿದರು.  ಈ ಮೂಲಕ ಶಿವನಿಗೆ ಮೊದಲ ಮದುವೆಯ ಆಮಂತ್ರಣವನ್ನು ನೀಡಿದರು.

ಅನಂತ್ ಅಂಬಾನಿಯವರ ವಿವಾಹವು ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರೊಂದಿಗೆ ಜುಲೈ 12 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಪ್ರತಿಷ್ಠಿತ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ.

ಸುಂದರವಾದ ಗುಲಾಬಿ ಬಣ್ಣದ ಸೀರೆಯನ್ನು ಧರಿಸಿರುವ ನೀತಾ ಅಂಬಾನಿ ಗಂಗಾ ಆರತಿಯಲ್ಲಿ ಪಾಲ್ಗೊಂಡಿದ್ದರು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ತಮ್ಮ ಭೇಟಿಯ ಉದ್ದೇಶದ ಬಗ್ಗೆ ಮಾತನಾಡಿದರು

"ನಾನು ಶಿವನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ. ಅನಂತ್ ಮತ್ತು ರಾಧಿಕಾ ಅವರ ಮದುವೆಯ ಆಮಂತ್ರಣದೊಂದಿಗೆ ಇಲ್ಲಿಗೆ ಬಂದಿದ್ದೇನೆ, ಅದನ್ನು ಸರ್ವೇಶ್ವರನಿಗೆ ಅರ್ಪಿಸುತ್ತೇನೆ. 10 ವರ್ಷಗಳ ನಂತರ ನಾನು ಇಲ್ಲಿಗೆ ಬಂದಿದ್ದೇನೆ. ನೋಡಿ ನನಗೆ ಸಂತೋಷವಾಗಿದೆ. ಇಲ್ಲಿನ ಅಭಿವೃದ್ಧಿ."
10 ವರ್ಷಗಳ ನಂತರ ದೇವಾಲಯಕ್ಕೆ ಭೇಟಿ ನೀಡಿದ ನಂತರ, ನೀತಾ ಅಂಬಾನಿ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು.

"ಗಂಗಾ ಆರತಿ ಸಮಯದಲ್ಲಿ ನಾನು ಇಲ್ಲಿಗೆ ಬಂದಿರುವುದು ನನ್ನ ಅದೃಷ್ಟ. ತುಂಬಾ ಚೆನ್ನಾಗಿದೆ ... ಇಲ್ಲಿ ತುಂಬಾ 'ಶಕ್ತಿ' ಇದೆ.
ದೇವಾಲಯದ ಭೇಟಿಯ ನಂತರ, ನೀತಾ ಅಂಬಾನಿ ಚಾಟ್ ಅಂಗಡಿಗೆ ಭೇಟಿ ನೀಡಿದರು ಮತ್ತು ಸ್ಥಳೀಯರೊಂದಿಗೆ ಸಂವಾದ ನಡೆಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ