ಶಿವರಾಜ್ ಕುಮಾರ್ ಸಿನಿಮಾ, ಜಾಹೀರಾತುಗಳಿಗೆ ನಿರ್ಬಂಧವಿಲ್ಲ ಎಂದ ಚುನಾವಣಾ ಆಯೋಗ

Krishnaveni K

ಬುಧವಾರ, 27 ಮಾರ್ಚ್ 2024 (13:00 IST)
ಬೆಂಗಳೂರು: ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪ್ರಚಾರ ನಡೆಸುತ್ತಿರುವ ಪತಿ, ನಟ ಶಿವರಾಜ್ ಕುಮಾರ್ ಸಿನಿಮಾಗಳಿಗೆ, ಜಾಹೀರಾತುಗಳಿಗೆ ಯಾವುದೇ ನಿರ್ಬಂಧವಿರಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಪತ್ನಿ ಪರ ಶಿವರಾಜ್ ಕುಮಾರ್ ಶಿವಮೊಗ್ಗದಲ್ಲಿ ಬಿಡುವಿಲ್ಲದೇ ಪ್ರಚಾರ ನಡೆಸುತ್ತಿದ್ದಾರೆ. ಜೊತೆಗೆ ಕಾಂಗ್ರೆಸ್ ನಾಯಕರ ಜೊತೆ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಹೀಗಾಗಿ ಅವರ ಸಿನಿಮಾ, ಜಾಹೀರಾತುಗಳು, ಬಿಲ್ ಬೋರ್ಡ್ ಗಳಿಗೆ ನಿರ್ಬಂಧ ವಿಧಿಸಬೇಕು ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ, ‘ಚುನಾವಣೆಗೆ ಸ್ಪರ್ಧಿಸುವ ಅಥವಾ ಪ್ರಚಾರ ಮಾಡುವ ನಟರನ್ನು ಒಳಗೊಂಡ ಸಿನಿಮಾಗಳ ಪ್ರದರ್ಶನವನ್ನು ಸರ್ಕಾರದ ಹಣದಿಂದ ನಡೆಸಲ್ಪಡುವ ದೂರದರ್ಶನ ವಾಹಿನಿಗಳಲ್ಲಿ ಮಾತ್ರ ನಿಷೇಧಿಸಬಹುದಾಗಿದೆ. ಖಾಸಗಿ ಟಿವಿ ಚಾನೆಲ್ ಗಳು ಅಥವಾ ಥಿಯೇಟರ್ ಗಳಲ್ಲಿ ನಿರ್ಬಂಧ ವಿಧಿಸಲು ಸಾಧ‍್ಯವಿಲ್ಲ’ ಎಂದಿದೆ.

ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಶಿವರಾಜ್ ಕುಮಾರ್ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಸಾರ್ವಜನಿಕ ರಾಲಿಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅವರು ಪ್ರಭಾವೀ ವ್ಯಕ್ತಿಯಾಗಿದ್ದರೂ ಅವರ ಸಿನಿಮಾಗಳ ಮೇಲೆ ನಿರ್ಬಂಧ ಹೇರಲು ಸಾ‍ಧ್ಯವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ