ಸಿನಿಮಾ ರಂಗದಿಂದ ಸ್ವಲ್ಪ ಸಮಯ ದೂರವಿರಲು ನಿರ್ಧರಿಸಿದ ಪವನ್ ಕಲ್ಯಾಣ್

ಶುಕ್ರವಾರ, 30 ಏಪ್ರಿಲ್ 2021 (06:58 IST)
ಹೈದರಾಬಾದ್ : ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾದ ನಟ ಪವನ್ ಕಲ್ಯಾಣ್ ಅವರು ಸಿನಿಮಾ ಕೆಲಸದಿಂದ ಸ್ವಲ್ಪ ಸಮಯ ದೂರವಿರಲು ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಪವನ್ ಕಲ್ಯಾಣ್ ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಇದೀಗ ಚೇತರಿಸಿಕೊಂಡಿದ್ದಾರೆ. ಹಾಗೇ ಅವರಿಗೆ ಶೀಘ್ರದಲ್ಲಿಯೇ ಗುಣಮುಖರಾಗಲು  ವೈದ್ಯರು ವಿಶ್ರಂತಿ ಪಡೆಯುವಂತೆ ಸೂಚಿಸಿದ್ದಾರೆ.

ಈ ನಿಟ್ಟಿನಲ್ಲಿ ಅವರು ಒಂದು ತಿಂಗಳ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದು, ಅದಕ್ಕಾಗಿ ಅವರು ಯಾವುದೇ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ