ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಮಾಡಿದವರಿಗೆ ತೀವ್ರಗೊಂಡ ಹುಡುಕಾಟ

ಮಂಗಳವಾರ, 29 ಡಿಸೆಂಬರ್ 2020 (10:51 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನು ಧ‍್ವಂಸಗೊಳಿಸಿದ ಆರೋಪಿಗಳಗಾಗಿ ಪೊಲೀಸರು ಇನ್ನೂ ತೀವ್ರ ಹುಡುಕಾಟ ನಡೆಸಿದ್ದಾರೆ.


ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾಗಳನ್ನು ಆಧರಿಸಿ ಆರೋಪಿಗಳ ಪತ್ತೆಗಾಗಿ ಶ್ರಮಿಸುತ್ತಿರುವುದಾಗಿ ಹೇಳಿರುವ ಪೊಲೀಸರು ಸದ್ಯದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸದಲ್ಲಿದ್ದಾರೆ. ಇನ್ನು, ಮಾಗಡಿ ರಸ್ತೆಯಲ್ಲಿ ನಿನ್ನೆ ವಿಷ್ಣುವರ್ಧನ್ ಪ್ರತಿಮೆ ಸ್ಥಾಪನೆಗೆ ಅವರ ಅಳಿಯ ನಟ, ಅನಿರುದ್ಧ್ ಭೂಮಿ ಪೂಜೆ ಮಾಡಿದ್ದಾರೆ. ಈ ವೇಳೆ ಸಚಿವ ಸೋಮಣ್ಣ ಕೂಡಾ ಉಪಸ್ಥಿತರಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ