ಪವರ್ ಸ್ಟಾರ್ ಪುನೀತ್ ಸಮಾಧಿ ಸುತ್ತ ಬಿಗಿ ಭದ್ರತೆ

ಮಂಗಳವಾರ, 2 ನವೆಂಬರ್ 2021 (09:45 IST)
ಬೆಂಗಳೂರು: ಪವರ್ ‍ಸ್ಟಾರ್ ಪುನೀತ್ ರಾಜ್ ಕುಮಾರ್ ಸಮಾಧಿಗೆ ಇಂದು ಕುಟುಂಬಸ್ಥರು ಹಾಲು-ತುಪ್ಪ ಬಿಡುವ ಕಾರ್ಯಕ್ರಮದ ಹಿನ್ನಲೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

ಅಭಿಮಾನಿಗಳಿಗೆ ಸದ್ಯಕ್ಕೆ ಸಮಾಧಿ ಬಳಿಗೆ ಪ್ರವೇಶ ನಿಷೇಧಿಸಲಾಗಿದೆ. ಹಾಗಿದ್ದರೂ ನೂರಾರು ಸಂಖ್ಯೆಯಲ್ಲಿ ಜನ ಬಂದು ಕಂಠೀರವ ಸ್ಟುಡಿಯೋ ಹೊರಗಿನಿಂದಲೇ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಹೀಗಾಗಿ ಸಮಾಧಿಗೆ ಯಾವುದೇ ತೊಂದರೆಯಾಗದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ಇಂದು ಕುಟುಂಬಸ್ಥರು ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ದೊರೆಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ