ಪ್ರಜ್ವಲ್ ರೇವಣ್ಣ ಕೃತ್ಯ ನನ್ನ ಮನಸ್ಸನ್ನು ಬೆಚ್ಚಿಬೀಳಿಸಿದೆ: ನಟ ಚೇತನ್ ಅಹಿಂಸಾ

Sampriya

ಸೋಮವಾರ, 29 ಏಪ್ರಿಲ್ 2024 (18:03 IST)
Photo Courtesy X
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಂಬಂಧ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಪ್ರತಿಕ್ರಿಯಿಸಿ ಪ್ರಜ್ವಲ್ ರೇವಣ್ಣ ಕೃತ್ಯ ನನ್ನ ಮನಸ್ಸನ್ನು ದಿಗ್ಭ್ರಮೆಗೊಳಿಸಿದೆ ಎಂದಿದ್ದಾರೆ.

ಮನೆ ಕೆಲಸದಾಕೆ ಮತ್ತು ಆಕೆಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿಯಲ್ಲಿ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ.ರೇವಣ್ಣ ಮತ್ತು ಅವರ ಮಗ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಈಗಾಗಲೇ ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿಗೆ ವಹಿಸಿದೆ. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಗಳು ಗಂಭೀರವಾಗಿದ್ದು, ತಪ್ಪು ಸಾಬೀತಾದರೆ ಕಠಿಣ ಶಿಕ್ಷೆಯಾಗಬೇಕು.

ಅನ್ಯಾಯಕ್ಕೊಳಗಾದ ಮಹಿಳೆಯರು ಧೈರ್ಯದಿಂದ ಮುಂದೆ ಬರುತ್ತಿರುವುದು ಸಂತಸ ತಂದಿದೆ. ಪೆನ್‌ಡ್ರೈವ್ ಸಮಸ್ಯೆಯನ್ನು 'ಸಾವಿರಾರು ನಿರ್ಭಯಾ'ಗಳಿಗೆ ಹೋಲಿಸಿ, ಅದಕ್ಕೆ ಪ್ರಧಾನಿ ಮೋದಿ, ಬಿಜೆಪಿ ಹೊಣೆ ಹೊರಬೇಕೆಂದು ಒತ್ತಾಯಿಸುತ್ತಿರುವ ಕಾಂಗ್ರೆಸ್ ಪಕ್ಷದ ಮಹಿಳೆಯರ ನಡೆ ಹಾಸ್ಯಾಸ್ಪದವಾಗಿದೆ ಎಂದು ಬರೆದುಕೊಂಡಿದ್ದಾರೆ.

ಲೈಂಗಿಕ ಹಗರಣದಲ್ಲಿ 2,900 ಪೆನ್‌ಡ್ರೈವ್ ಚಿತ್ರಗಳು, ವಿಡಿಯೊಗಳನ್ನು ಕಾರ್ಯರೂಪಕ್ಕೆ ತರಲು ಆರೋಪಿ ಪ್ರಜ್ವಲ್ ರೇವಣ್ಣ ನಡೆಸಿದ ಸಂಪೂರ್ಣ ನಿರ್ಭಯತೆಯು ನನ್ನ ಮನಸ್ಸನ್ನು ದಿಗ್ಭ್ರಮೆಗೊಳಿಸಿದೆ. ಪೆನ್‌ಡ್ರೈವ್ ಅನ್ನು ಸಾರ್ವಜನಿಕಗೊಳಿಸಿದರೆ ಅವರ ಪಕ್ಷ, ಕುಟುಂಬದವರು ಎದುರಿಸಬೇಕಾದ ಭೀಕರ ಪರಿಣಾಮಗಳ ಬಗ್ಗೆ ಯಾವುದೇ ಭಯವಿರಲಿಲ್ಲವೇ? ಎಂದು ಚೇತನ್ ಬರೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ