ಚಂಡಮಾರುತದಿಂದ ಸೂರು ಕಳೆದುಕೊಂಡವರಿಗೆ ನೆರವಾದ ನಟ ಪ್ರಕಾಶ್ ರೈ

ಗುರುವಾರ, 26 ನವೆಂಬರ್ 2020 (10:42 IST)
ಚೆನ್ನೈ: ತಮಿಳುನಾಡಿನಲ್ಲಿ ನಿವಾರ್ ಚಂಡಮಾರುತದಿಂದ ಭಾರೀ ಮಳೆಯಾಗಿದ್ದು, ಹಲವೆಡೆ ಜನರು ಮನೆ ಮಠ ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ. ಇಂತಹವರ ನೆರವಿಗೆ ನಟ ಪ್ರಕಾಶ್ ರೈ ಧಾವಿಸಿದ್ದಾರೆ.


ಬಹುಭಾಷಾ ತಾರೆ ಪ್ರಕಾಶ್ ರೈ ತಮ್ಮ ಪ್ರಕಾಶ್ ರೈ ಫೌಂಡೇಷನ್ ಮೂಲಕ ಸೂರು ಕಳೆದುಕೊಂಡವರಿಗೆ ತಾತ್ಕಾಲಿಕವಾಗಿ ವಸತಿ, ಊಟದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಪ್ರಕಾಶ್ ರೈ ‘ಈ ಸಂತ್ರಸ್ತರಿಗೆ ನನ್ನ ಕೈಲಾದ ನೆರವು ನೀಡಿದ್ದೇನೆ ಎಂದು ನೆಮ್ಮದಿಯಿದೆ’ ಎಂದು ಬರೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ