ಕನ್ನಡ ಚಿತ್ರರಂಗದ ನಿರ್ಮಾಪಕ ಎಂ.ಭಕ್ತವತ್ಸಲಂ ಇನ್ನಿಲ್ಲ

ಸೋಮವಾರ, 6 ಆಗಸ್ಟ್ 2018 (07:52 IST)
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಂ.ಭಕ್ತವತ್ಸಲಂ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕ, ವಿತರಕ ಹಾಗೂ ಪ್ರದರ್ಶಕರಾಗಿ ಗುರುತಿಸಿಕೊಂಡಿದ್ದ ಭಕ್ತವತ್ಸಲಂ, 1971 ರಲ್ಲಿ 'ಸಂಪೂರ್ಣ ರಾಮಾಯಣ' ಸಿನಿಮಾ ನಿರ್ಮಾಣ ಮಾಡಿದ್ದರು. ಎಂ.ಎಸ್.ಸತ್ಯು ನಿರ್ದೇಶಿಸಿ ಅನಂತ್‍ನಾಗ್, ಬಿ.ವಿ. ಕಾರಂತ್ ನಟಿಸಿದ್ದ ಕನ್ನೇಶ್ವರರಾಮ ಸೇರಿದಂತೆ ಹಲವಾರು ಚಿತ್ರಗಳಿಗೆ ಬಂಡವಾಳ ಹಾಕಿದ್ದರು.


ಕರ್ನಾಟಕ ಚಲನಚಿತ್ರ ವಾಣಿಜ್ಯಮಂಡಳಿಯಲ್ಲಿ ಸುಮಾರು 7 ವರ್ಷಗಳ ಕಾಲ ಅಧ್ಯಕ್ಷರಾಗಿದ್ದ ಇವರು ಸೌತ್ ಇಂಡಿಯಾನ್ ಫಿಲಂ ಚೇಂಬರ್ ಅಧ್ಯಕ್ಷರಾಗಿದ್ದರು. ಜತೆಗೆ ಫಿಲಂ ಫೆಡರೇಷನ್ ಇಂಡಿಯಾಗೆ ಆಯ್ಕೆಯಾದ ಅತ್ಯಂತ ಕಿರಿಯ ಅಧ್ಯಕ್ಷ ಎನಿಸಿಕೊಂಡಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ