ಪುನೀತ್ ಪುಣ್ಯ ಸ್ಮರಣೆ : ಸಾರ್ವಜನಿಕರಿಗೆ ಪ್ರವೇಶ ಯಾವಾಗ?

ಸೋಮವಾರ, 8 ನವೆಂಬರ್ 2021 (07:22 IST)
ನಟ ಪುನೀತ್ ರಾಜ್ಕುಮಾರ್ ನಿಧನರಾಗಿ 11 ದಿನ ಆಗಿದೆ. ಈ ಹಿನ್ನೆಲೆಯಲ್ಲಿ ಇಂದು (ನ.8) ಅವರ ಪುಣ್ಯ ಸ್ಮರಣೆ ಕಾರ್ಯ ನಡೆಯುತ್ತಿದೆ.
11ನೇ ದಿನದ ಪೂಜೆಯಲ್ಲಿ ಅಪ್ಪು ಕುಟುಂಬದವರು ಭಾಗಿ ಆಗಿದ್ದಾರೆ.
12 ಗಂಟೆವರೆಗೆ ಸಾರ್ವಜನಿಕರಿಗೆ ನೋ ಎಂಟ್ರಿ
ಪ್ರತಿದಿನ ಅಪಾರ ಸಂಖ್ಯೆಯ ಅಭಿಮಾನಿಗಳು ಅಪ್ಪು ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ಜನರು ಕಿಲೋ ಮೀಟರ್ಗಟ್ಟಲೆ ಉದ್ದದ ಸಾಲಿನಲ್ಲಿ ನಿಂತು ಕಾಯುತ್ತಿರುವ ದೃಶ್ಯ ದಿನವೂ ಕಂಡು ಬರುತ್ತಿದೆ. ಇಂದು 11ನೇ ದಿನದ ಕಾರ್ಯವಾದ್ದರಿಂದ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಬರುವ ಸಾಧ್ಯತೆ ಇದೆ. ಆದರೆ ಮಧ್ಯಾಹ್ನ 12 ಗಂಟೆಯವರೆಗೆ ಕಂಠೀರವ ಸ್ಟುಡಿಯೋ ಆವರಣದೊಳಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. 12 ಗಂಟೆ ಬಳಿಕ ಅಪ್ಪು ಸಮಾಧಿ ದರ್ಶನ ಮಾಡಲು ಅಭಿಮಾನಿಗಳಿಗೆ ಅವಕಾಶ ಸಿಗಲಿದೆ. ಮಂಗಳವಾರ (ನ.9) ಅರಮನೆ ಮೈದಾನದಲ್ಲಿ ಅನ್ನ ಸಂತರ್ಪಣೆ ಮಾಡಲಾಗುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ