ಹೊಂಬಾಳೆ ಫಿಲಂಸ್ ವಿರುದ್ಧ ಅಪ್ಪು ಅಭಿಮಾನಿಗಳ ಆಕ್ರೋಶ

ಗುರುವಾರ, 27 ಅಕ್ಟೋಬರ್ 2022 (14:42 IST)
ಬೆಂಗಳೂರು: ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಮೇಲೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ.

ಕಾರಣ, ನಾಳೆ ಪುನೀತ್ ರಾಜ್ ಕುಮಾರ್ ಕೊನೆಯ ಸಿನಿಮಾ ಗಂಧದ ಗುಡಿ ತೆರೆಗೆ ಬರುತ್ತಿದ್ದು, ಈ ಸಿನಿಮಾಗೆ ಹೆಚ್ಚು ಥಿಯೇಟರ್ ಸಿಗುತ್ತಿಲ್ಲ. ಇದಕ್ಕೆ ಹೊಂಬಾಳೆ ಫಿಲಂಸ್ ಒತ್ತಡ ಹಾಕುತ್ತಿದ್ದಾರೆ ಎಂದು ಶಿರಸಿಯಲ್ಲಿ ಅಪ್ಪು ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ.

ಹೊಂಬಾಳೆ ಫಿಲಂಸ್ ನಿರ್ಮಾಣದ ಕಾಂತಾರ ಇತ್ತೀಚೆಗೆ ಬಿಡುಗಡೆಯಾಗಿ ದೊಡ್ಡ ಮಟ್ಟಿಗೆ ಸದ್ದು ಮಾಡುತ್ತಿದೆ. ಆದರೆ ಈ ಸಿನಿಮಾಗಾಗಿ ಗಂಧದ ಗುಡಿಗೆ ಥಿಯೇಟರ್ ಸಿಗದಂತೆ ಮಾಡುತ್ತಿದ್ದಾರೆ ಎಂಬುದು ಅಪ್ಪು ಅಭಿಮಾನಿಗಳ ಆಕ್ರೋಶಕ್ಕೆ ಕಾರಣ.


-Edited by Rajesh Patil

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ