ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಅಸಮಾಧಾನಗೊಂಡ ಪುನೀತ್ ರಾಜ್ ಕುಮಾರ್

ಬುಧವಾರ, 22 ಆಗಸ್ಟ್ 2018 (12:49 IST)
ಬೆಂಗಳೂರು : ಕೊಡಗಿನ ಜನರಿಗೆ ಸಹಾಯ ಮಾಡುವ ವಿಚಾರವೊಂದರ ಕುರಿತಂತೆ ತಮ್ಮ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದಕ್ಕೆ ಇದೀಗ ನಟ ಪುನೀತ್ ರಾಜ ಕುಮಾರ್ ಅವರು ಅಸಮಾಧಾನಗೊಂಡಿದ್ದಾರೆ.

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮವರ ಕಷ್ಟಕ್ಕೆ ನಾವೇ ಸ್ಪಂದಿಸಬೇಕು ಎನ್ನುವ ಮೂಲಕ, ತಮ್ಮದೊಂದು ತಂಡವನ್ನ ಕಟ್ಟಿ ಆ ಮೂಲಕ ಕೊಡಗು ಜನತೆಯ ಸಹಾಯಕ್ಕೆ ಮುಂದಾಗಿದ್ರು. ಆದರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊಡಗಿನಲ್ಲಿ ಸೂರು ಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಡಲ್ಲಿದ್ದಾರೆ ಎಂದು ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಈ ಸುದ್ದಿ ಸಾಮಾಜಿಕ‌ ಜಾಲತಾಣ ಸೇರಿದಂತೆ ಕೆಲ ಮಿಡಿಯಾಗಳಲ್ಲಿ ವೈರಲ್ ಆಗಿತ್ತು .

 

ಆದರೆ ಈ ಸುದ್ದಿ ಶುದ್ಧ ಸುಳ್ಳು ಎಂದು ಇಂತಹ ಸುಳ್ಳು ಸುದ್ದಿ ಕೇಳಿ ಸ್ವತಃ ಪುನೀತ್ ರಾಜ್ಕುಮಾರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ ಎಂದು ಅಪ್ಪು ಅವರ ಆಪ್ತ ವಲಯ ಸ್ಪಷ್ಟಪಡಿಸಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ