ಪುನೀತ್ ಬಾನದಾರಿಯಲ್ಲಿ ಕಾರ್ಯಕ್ರಮ ಇಂದು: ಡಾ.ರಾಜ್ ಕುಟುಂಬ ಭಾಗಿ

ಮಂಗಳವಾರ, 7 ಫೆಬ್ರವರಿ 2023 (08:50 IST)
Photo Courtesy: Twitter
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೌರವಾರ್ಥ ಇಂದು ಬಾನದಾರಿಯಲ್ಲಿ ಪುನೀತ್ ಪಯಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಪದ್ಮನಾಭನಗರದ ವಾಜಪೇಯಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ವರ್ಗದವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ.

ಇದೇ ವೇಳೆ ಬೆಂಗಳೂರಿನ ಹೊರವರ್ತುಲ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ತೀರ್ಮಾನಿಸಲಾಗಿದೆ. ನಾಯಂಡಹಳ್ಳಿ ಜಂಕ್ಷನ್ ನಿಂದ ಸಿಟಿ ಮಾಲ್ ಜಂಕ್ಷನ್ ವರೆಗಿನ 12 ಕಿ.ಮೀ. ರಸ್ತೆಗೆ ಪುನೀತ್ ಹೆಸರಿಡಲಾಗುತ್ತಿದೆ. ಈ ಮೂಲಕ ಪುನೀತ್ ಗೆ ಗೌರವ ಸಮರ್ಪಿಸಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ