ಪತಿ ಸಾವಿನ ಬಳಿಕ ಮೊದಲ ಬಾರಿಗೆ ಹೊರಗೆ ಕಾಣಿಸಿಕೊಂಡ ಮೇಘನಾ ರಾಜ್

ಸೋಮವಾರ, 15 ಜೂನ್ 2020 (08:48 IST)
ಬೆಂಗಳೂರು: ಚಿರಂಜೀವಿ ಸರ್ಜಾ ಸಾವಿಗೀಡಾಗಿ ನಿನ್ನೆಗೆ ಒಂದು ವಾರ ಕಳೆದಿದೆ. ಈ ನಡುವೆ ರಾಘವೇಂದ್ರ ರಾಜಕುಮಾರ್ ತಮ್ಮ ಪತ್ನಿ ಮತ್ತು ಮಕ್ಕಳ ಸಮೇತ ಚಿರು ಸರ್ಜಾ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.


ಇನ್ನೂ ಚಿರು ಸರ್ಜಾ ಸಾವಿನ ಆಘಾತದಿಂದ ಹೊರಬರದ ಕುಟುಂಬಕ್ಕೆ ಖುದ್ದಾಗಿ ಭೇಟಿ ನೀಡಿ ಸಾಂತ್ವನಿಸುವ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲದೆ ತವರು ಮನೆಯಲ್ಲಿದ್ದ ಚಿರು ಪತ್ನಿ ಮೇಘನಾ ರಾಜ್ ಅವರನ್ನೂ ಭೇಟಿಯಾಗಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪತಿ ಚಿರು ಸಾವಿನ ಬಳಿಕ ಇದೇ ಮೊದಲ ಬಾರಿಗೆ ಮೇಘನಾ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಅವರ ಮುಖದಲ್ಲಿ ಅದೇ ಬೇಸರ ಎದ್ದು ಕಾಣುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ