ಚೆನ್ನೈನಲ್ಲಿ ನಡೆಯುತ್ತಿದೆ ರಜನೀಕಾಂತ್ ಮಹತ್ವದ ಸಭೆ!

ಮಂಗಳವಾರ, 26 ಡಿಸೆಂಬರ್ 2017 (09:22 IST)
ಚೆನ್ನೈ: ಹೊಸ ವರ್ಷದ ವೇಳೆಗೆ ಸೂಪರ್ ಸ್ಟಾರ್ ರಜನೀಕಾಂತ್ ಹೊಸ ಪಕ್ಷ ಘೋಷಣೆ ಮಾಡುತ್ತಾರೆ ಎಂಬ ಸುದ್ದಿಗಳ ಬೆನ್ನಲ್ಲೇ ಇಂದು ಚೆನ್ನೈನಲ್ಲಿ ಮಹತ್ವದ ಸಭೆ ನಡೆಯುತ್ತಿದೆ.
 

ಟಿ ನಗರದ ಕಲ್ಯಾಣ ಮಂಟಪದಲ್ಲಿ ಅಭಿಮಾನಿಗಳೊಂದಿಗೆ ರಜನಿ ಮಹತ್ವದ ಸಭೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಘೋಷಣೆ ಮಾಡಬಹುದು ಎಂದೇ ಲೆಕ್ಕಾಚಾರ ಹಾಕಲಾಗಿದೆ.

ಈಗಾಗಲೇ ಭಾಷಣ ಆರಂಭಿಸಿರುವ ರಜನೀಕಾಂತ್ ತಮ್ಮ ಸಿನಿ ಬದುಕಿನ ಬಗ್ಗೆ, ಆರಂಭದ ದಿನಗಳ ಬಗ್ಗೆ ಮಾತನಾಡುತ್ತಿದ್ದಾರೆ.  ಇಂದು ಅವರು ರಾಜಕೀಯ ಪ್ರವೇಶದ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ