ಇಂದು ಪದ್ಮಭೂಷಣ ಡಾ. ರಾಜ್ ಕುಮಾರ್ ಅವರ ವರ್ಧಂತಿ. ಅವರ ಈ ಜನ್ಮದಿನವನ್ನು ರಾಜ್ ಅಭಿಮಾನಿಗಳು ಅದ್ಧೂರಿಯಿಂದ ಮಾಡುತ್ತಾರೆ. ಅಣ್ಣ ಸಂತರ್ಪಣೆ, ರಕ್ತದಾನ ಶಿಬಿರ ಸೇರಿದಂತೆ ಅನೇಕ ಲೋಕ ಕಲ್ಯಾಣ ಕಾರ್ಯಕ್ರಮಗಳನ್ನು ಮಾಡುತ್ತಾರೆ. ಡಾ. ರಾಜ್ ಅವರ ಸಮಾಧಿಗೆ ಹೂವಿನಿಂದ ಅಲಂಕರಿಸಿ ಪೂಜಿಸುತ್ತಾರೆ. ಇಂದು ಕರ್ನಾಟಕ ರಾಜ್ಯ ಸರ್ಕಾರವು ಸಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಸಂಜೆ 6:15 ರ ಬಳಿಕ ಕಾರ್ಯಕ್ರಮಗಳು ಆರಂಭ ಆಗುತ್ತದೆ.
ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ. ಚಂದ್ರಶೇಖರ್ ಕಂಬಾರರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಶ್ರೀಮತಿ ಪಾರ್ವತಮ್ಮ ರಾಜ್ಕುಮಾರ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಿರಿಯ ಕಲಾವಿದೆ ಸಾಹುಕಾರ್ ಜಾನಕಿ ಸೇರಿದಂತೆ ಅನೇಕ ಹಿರಿ ಕಿರಿ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.