ಪುನೀತ್ ಗೆ ಕರ್ನಾಟಕ ರತ್ನ ಕಾರ್ಯಕ್ರಮಕ್ಕೆ ರಜನೀಕಾಂತ್ ಗೆ ಆಹ್ವಾನ

ಗುರುವಾರ, 27 ಅಕ್ಟೋಬರ್ 2022 (09:10 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರಿಗೆ ನವಂಬರ್ 1 ರಂದು ರಾಜ್ಯೋತ್ಸವ ಸಂದರ್ಭದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನ ಮಾಡಿದೆ.

ಈ ಕಾರ್ಯಕ್ರಮ ವಿಧಾನಸೌಧದ ಮಹಾಧ್ವಾರದ ಮೆಟ್ಟಿಲುಗಳ ಮೇಲೆ ವೇದಿಕೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವೇ ಆಯೋಜಿಸುತ್ತಿದೆ.

ಸಾರ್ವಜನಿಕರಿಗೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಖ್ಯಮಂತ್ರಿಗಳು ಆಹ್ವಾನ ನೀಡಿದ್ದಾರೆ. ಇದರ ಜೊತೆಗೆ ಗಣ್ಯಾತಿಗಣ್ಯರನ್ನು ಸರ್ಕಾರವೇ ಆಹ್ವಾನಿಸುತ್ತಿದೆ. ಡಾ. ರಾಜ್ ಕುಟುಂಬ, ಕನ್ನಡ ಚಿತ್ರರಂಗದ ದಿಗ್ಗಜರ ಜೊತೆಗೆ ಸೂಪರ್ ಸ್ಟಾರ್ ರಜನೀಕಾಂತ್, ಜ್ಯೂ.ಎನ್ ಟಿಆರ್ ಗೂ ವಿಶೇಷ ಆಹ್ವಾನ ನೀಡಲಾಗಿದೆ.


-Edited by Rajesh Patil

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ