ಕನ್ನಡ ಚಿತ್ರರಂಗವನ್ನು ಯಾರೂ ಲೆಕ್ಕಕ್ಕೇ ತೆಗೆದುಕೊಂಡಿರ್ಲಿಲ್ಲ: ರಾಮ್ ಗೋಪಾಲ್ ವರ್ಮಾ

ಶುಕ್ರವಾರ, 15 ಜನವರಿ 2021 (11:06 IST)
ಬೆಂಗಳೂರು: ಕೆಜಿಎಫ್ ಸಿನಿಮಾ ಬಂದ ಮೇಲೆ ಕನ್ನಡ ಚಿತ್ರರಂಗವನ್ನು ಬೇರೆಯವರು ನೋಡುವ ದೃಷ್ಟಿಕೋನವೇ ಬದಲಾಗಿದೆ. ಅದೇ ವಿಚಾರದ ಬಗ್ಗೆ ಇದೀಗ ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮಾತನಾಡಿದ್ದಾರೆ.


ಪ್ರಭಾಸ್ ಅಭಿನಯದ ಸಲಾರ್ ಸಿನಿಮಾ ಮುಹೂರ್ತ ಕಾರ್ಯಕ್ರಮಕ್ಕೆ ರಾಕಿಂಗ್ ಸ್ಟಾರ್ ಯಶ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವ ಸುದ್ದಿಯ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಮ್ ಗೋಪಾಲ್ ವರ್ಮಾ ‘ಎರಡು ವರ್ಷಗಳ ಹಿಂದೆ ಕನ್ನಡ ಚಿತ್ರರಂಗವನ್ನು ಬಾಲಿವುಡ್ ಮಾತ್ರವಲ್ಲ, ದಕ್ಷಿಣ ಭಾರತದ ಸಿನಿಮಾ ರಂಗವೇ ಲೆಕ್ಕಕ್ಕೇ ತೆಗೆದುಕೊಂಡಿರಲಿಲ್ಲ. ಆದರೆ ಕೆಜಿಎಫ್ ಮೂಲಕ ಕನ್ನಡ ಸಿನಿಮಾ ರಂಗವನ್ನು ವಿಶ್ವಮಟ್ಟಕ್ಕೆ ಏರಿಸಿದ್ದರ ಹಿರಿಮೆ ಪ್ರಶಾಂತ್ ನೀಲ್ ಮತ್ತು ಯಶ್ ಮತ್ತು ಅವರ ಕೆಜಿಎಫ್ ತಂಡಕ್ಕೆ ಸೇರಬೇಕು’ ಎಂದು ರಾಮ್ ಗೋಪಾಲ್ ವರ್ಮಾ ಅಭಿಪ್ರಾಯಪಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ