ಎಸ್.ಎಂ. ಕೃಷ್ಣ ಬೆನ್ನಲ್ಲೇ ಬಿಜೆಪಿಗೆ ರಮ್ಯಾ..?

ಮಂಗಳವಾರ, 14 ಮಾರ್ಚ್ 2017 (15:36 IST)
ಮಂಡ್ಯ(ಮಾ.14): ಮಾಜಿ ಸಿಎಂ ಎಸ್.ಎಂ. ಕೃಷ್ಣ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. . ನಾಳೆ ಎಸ್.ಎಂ. ಕೃಷ್ಣ ಬಿಜೆಪಿ ಸೇರುವುದು ಬಹುತೇಕ ಖಚಿತಗೊಂಡಿದೆ. ಎಸ್.ಎಂ. ಕೃಷ್ಣ ಬೆನ್ನಲ್ಲೇ ಅವರ ಬೆಂಬಲಿಗರೂ ಕಮಲ ಹಿಡಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರಲ್ಲಿ ಪ್ರಮುಖವಾದ ಹೆಸರು ನಟಿ ಮತ್ತು ಮಾಜಿ ಸಂಸದೆ ರಮ್ಯಾ.

ಕೃಷ್ಣ ಅವರ ರಾಜಕೀಯ ಕರ್ಮಭೂಮಿ ಮಂಡ್ಯದಲ್ಲಿ ಈ ಬಗ್ಗೆ ಮಾತುಗಳು ಹರಿದಾಡುತ್ತಿದ್ದು, ರಮ್ಯಾ ಸೇರ್ಪಡೆಗೆ ಬಿಜೆಪಿ ಪಕ್ಷದ ಕಾರ್ಯಕರ್ತರಿಂದ ವಿರೋಧಗಳು ವ್ಯಕ್ತವಾಗಿವೆ. ಈ ಹಿಂದೆ ಆರೆಸ್ಸೆಸ್ ಸ್ವಾತಂತ್ರ್ಯ ಹೋರಾಟದಲ್ಲಿ ಏನೂ ಮಾಡಿಲ್ಲ. ಪಾಕಿಸ್ತಾನ ಚೆನ್ನಾಗಿದೆ ಎಂದು ಹೇಳಿಕೆ ನೀಡಿದ್ದ ರಮ್ಯಾರನ್ನ ಪಕ್ಷಕ್ಕೆ ಸೇರಿಸಿಕೊಳ್ಳಬಾರದೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮ್ಯಾ ಬಿಜೆಪಿ ಸೇರ್ಪಡೆಯ ಸುದ್ದಿ ಬಗ್ಗೆ ಯಾವುದೇ ಖಚಿತ ಮಾಹಿತಿ ಇಲ್ಲ. ರಮ್ಯಾ ಸಹ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ವೆಬ್ದುನಿಯಾವನ್ನು ಓದಿ