ನಾಗಭೂಷಣ್ ಅತೀ ವೇಗವೇ ಅಪಘಾತಕ್ಕೆ ಕಾರಣ: ಡಿಸಿಪಿ

ಭಾನುವಾರ, 1 ಅಕ್ಟೋಬರ್ 2023 (16:38 IST)
Photo Courtesy: Twitter
ಬೆಂಗಳೂರು: ಕಾರು ಅಪಘಾತಕ್ಕೀಡಾಗಿ ಓರ್ವ ಮಹಿಳೆಯ ಸಾವಿಗೆ ಕಾರಣರಾದ ನಟ ನಾಗಭೂಷಣ್ ಪ್ರಕರಣದ ಬಗ್ಗೆ ಡಿಸಿಪಿ ಶಿವಪ್ರಕಾಶ್ ಮಾಹಿತಿ ನೀಡಿದ್ದಾರೆ.

ಘಟನೆ ವೇಳೆ ನಾಗಭೂಷಣ್ ಮದ್ಯ ಸೇವಿಸಿರಲಿಲ್ಲ ಎಂಬುದು ಪರೀಕ್ಷೆಯಿಂದ ದೃಢಪಟ್ಟಿದೆ. ನಾಗಭೂಷಣ್ ರಕ್ತದ ಮಾದರಿಯನ್ನೂ ಪರೀಕ್ಷೆಗೊಳಪಡಿಸಲಾಗಿತ್ತು.

ಆದರೆ ಅತೀ ವೇಗವಾಗಿ ಕಾರು ಚಲಾಯಿಸಿದ್ದೇ ಅಪಘಾತವಾಗಲು ಕಾರಣ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ನಾಗಭೂಷಣ್ ವಿರುದ್ಧ ರಾಶ್ ಡ್ರೈವಿಂಗ್, ಫುಟ್ಪಾತ್ ಮೇಲೆ ಚಾಲನೆ, ಜೀವಕ್ಕೆ ಹಾನಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಠಾಣೆ ಬೇಲ್ ಮೇಲೆ ನಾಗಭೂಷಣ್ ರನ್ನು ಬಿಡುಗಡೆ ಮಾಡಲಾಗಿದೆ. ಆದರೆ ಮಂಗಳವಾರ ಅವರು ವಿಚಾರಣೆಗೆ ಹಾಜರಾಗಬೇಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ