ನ್ಯಾಷನಲ್ ಅವಾರ್ಡ್: ರಕ್ಷಿತ್ ಶೆಟ್ಟಿ ಬಿಟ್ಟು ಉಳಿದವರಿಗೆಲ್ಲರಿಗೂ ಅಭಿನಂದನೆ ತಿಳಿಸಿದ ರಶ್ಮಿಕಾ ಮಂದಣ್ಣ

ಶನಿವಾರ, 26 ಆಗಸ್ಟ್ 2023 (09:22 IST)
ಬೆಂಗಳೂರು: ಮೊನ್ನೆಯಷ್ಟೇ ಪ್ರಕಟವಾದ ಚಲನಚಿತ್ರ ರಾಷ್ಟ್ರ ಪ್ರಶಸ್ತಿಯಲ್ಲಿ ಕನ್ನಡದ 777 ಚಾರ್ಲಿ ಕನ್ನಡದ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಗೆದ್ದುಕೊಂಡಿತ್ತು.

ಪ್ರಶಸ್ತಿ ಘೋಷಣೆ ಬಳಿಕ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಕಿರಿಕ್ ಬೆಡಗಿ ರಶ್ಮಿಕಾ ರಾಷ್ಟ್ರಪ್ರಶಸ್ತಿ ಪಡೆದ ಪರ ಭಾಷೆಯ ತಾರೆಯರು, ಸಿನಿಮಾಗಳನ್ನು ಅಭಿನಂದಿಸಿದ್ದಾರೆ.

ಆದರೆ ತಮಗೆ ಮೊದಲ ಅವಕಾಶ ಕೊಟ್ಟ ರಕ್ಷಿತ್ ಶೆಟ್ಟಿಯನ್ನು ಮಾತ್ರ ಕೈ ಬಿಟ್ಟಿದ್ದಾರೆ. ಇದು ಅಭಿಮಾನಿಗಳ ಕೆಂಗಣ‍್ಣಿಗೆ ಗುರಿಯಾಗಿದೆ. ಪ್ರಶಸ್ತಿ ವಿಜೇತರಿಗೆ ಅಭಿನಂದಿಸುವಾಗ ಕನ್ನಡ ಸಿನಿಮಾವನ್ನು ಕೈ ಬಿಟ್ಟಿದ್ದಕ್ಕೆ ನೆಟ್ಟಿಗರು ರಶ್ಮಿಕಾರನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ