ಎನ್ ಕೌಂಟರ್ ಆದವರೇ ರೇಪಿಸ್ಟ್ ಗಳು ಎನ್ನುವುದಕ್ಕೆ ಸಾಕ್ಷ್ಯವೇನು? ರಿಯಲ್ ಸ್ಟಾರ್ ಉಪೇಂದ್ರ ತಕರಾರು

ಶನಿವಾರ, 7 ಡಿಸೆಂಬರ್ 2019 (08:45 IST)
ಬೆಂಗಳೂರು: ಹೈದರಾಬಾದ್ ನಲ್ಲಿ ಪಶು ವೈದ್ಯೆಯ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಆರೋಪಿಗಳನ್ನು ಎನ್ ಕೌಂಟರ್ ಮಾಡಿರುವ ಪೊಲೀಸರ ಕ್ರಮವನ್ನು ರಿಯಲ್ ಸ್ಟಾರ್ ಉಪೇಂದ್ರ ಪ್ರಶ್ನಿಸಿದ್ದಾರೆ. ಅವರ ಈ ತಕರಾರಿಗೆ ಹಲವು ಪರ ವಿರೋಧ ಅಭಿಪ್ರಾಯಗಳೂ ವ್ಯಕ್ತವಾಗಿದೆ.


ತಮ್ಮ ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ಈ ನಾಲ್ಕು ಹುಡುಗರೇ ಆಕೆಯನ್ನು ರೇಪ್ ಮಾಡಿ ಸುಟ್ಟು ಹಾಕಿದ್ದಾರೋ ಇಲ್ಲ ಇದರ ಹಿಂದೆ ಬೇರೆ ಯಾರೋ ಪ್ರಮುಖ ವ್ಯಕ್ತಿಗಳ ಕೈವಾಡವಿದೆಯಾ? ಈ ರೀತಿಯ ಎನ್ ಕೌಂಟರ್ ಪ್ರಮುಖ ವ್ಯಕ್ತಿಗಳ ಕೇಸ್ನಲ್ಲಿ ಯಾಕಾಗುವುದಿಲ್ಲ? ಕೋರ್ಟಲ್ಲಿ ವಿಚಾರಣೆಗೂ ಮುನ್ನ ನಡೆದ ಎನ್ ಕೌಂಟರ್ ಇನ್ನು ಮುಂದೆ ಪ್ರಭಾವಶಾಲಿ ರೇಪಿಸ್ಟ್ ಗಳಿಗೆ ರತ್ನಗಂಬಳಿಯಾಗುವುದೇ? ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ಹಲವರು ಪರ-ವಿರೋಧವಾಗಿ ಚರ್ಚೆ ಮಾಡಿದ್ದಾರೆ. ತಮ್ಮ ಅಭಿಪ್ರಾಯದ ಬಗ್ಗೆ ಚರ್ಚೆಯಾಗುತ್ತಿದ್ದಂತೆ ಉಪೇಂದ್ರ ಮತ್ತೊಂದು ಸಂದೇಶ ಬರೆದಿದ್ದು ‘ಒಂದು ಕಾಲದಲ್ಲಿ ಇದೇ ರೀತಿ ಎನ್ ಕೌಂಟರ್ ಮಾಡಿ ರೌಡಿಸಂಗೆ ಕಡಿವಾಣ ಹಾಕಿದ ಹಾಗೆ ನಿಷ್ಠಾವಂತ ಪೊಲೀಸ್ ಅಧಿಕಾರಿಗಳು ಮನಸು ಮಾಡಿದರೆ ಎನ್ ಕೌಂಟರ್ ಮೂಲಕ ಈ ಅತ್ಯಾಚಾರದ ಪಿಡುಗನ್ನು ನಿರ್ಮೂಲನೆ ಮಾಡಬಹುದು. ಆದರೆ ಇದನ್ನು ಹಣವಂತರು, ಪ್ರಭಾವಿಗಳು ದುರುಪಯೋಗ ಪಡಿಸಿಕೊಳ್ಳದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು’ ಎಂದು ಸ್ಪಷ್ಟನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ