ರಾಕಿಂಗ್ ಸ್ಟಾರ್ ಯಶ್ ಗೆ ಕನ್ನಡ ಕಲಾಭೂಷಣ ಪ್ರಶಸ್ತಿ

ಬುಧವಾರ, 20 ನವೆಂಬರ್ 2019 (10:25 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರಿಗೆ ಕನ್ನಡ ಕಲಾಭೂಷಣ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ಪ್ರಧಾನ ಸಮಾರಂಭ ಮುಂದಿನ ತಿಂಗಳು ನಡೆಯಲಿದೆ.


ಕನ್ನಡ ಗೆಳೆಯರ ಬಳಗ ಮತ್ತು ಜಿಕೆಜಿಎಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗುವ ಕರುನಾಡ ಸಂಭ್ರಮ ಕಾರ್ಯಕ್ರಮ ಮುಂದಿನ ತಿಂಗಳು 3 ರಿಂದ 8 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಯಶ್ ಮತ್ತು ದ್ವಾರಕೀಶ್ ಅವರಿಗೆ ಕನ್ನಡ ಕಲಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಈ ಸಂದರ್ಭದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ