ದರ್ಶನ್ ಗೆ ಶಿಕ್ಷೆಯಾಗುವ ಬಗ್ಗೆ ಮುಲಾಜಿಲ್ಲದೇ ಹೇಳಿಕೆ ನೀಡಿದ ರಾಕ್ ಲೈನ್ ವೆಂಕಟೇಶ್

Krishnaveni K

ಸೋಮವಾರ, 12 ಆಗಸ್ಟ್ 2024 (13:56 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಬಗ್ಗೆ ಅವರ ಆಪ್ತವಲಯದಲ್ಲಿರುವ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಹತ್ವದ ಹೇಳಿಕೆ ನೀಡಿದ್ದಾರೆ.

ನಾಳೆ ಮತ್ತು ನಾಡಿದ್ದು ಕಲಾವಿದರ ಸಂಘದಲ್ಲಿ ಕನ್ನಡ ಚಿತ್ರರಂಗದ ವತಿಯಿಂದ ಪೂಜೆ, ಹವನ ನಡೆಯುತ್ತಿದೆ. ಇದರ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ರಾಕ್ ಲೈನ್ ವೆಂಕಟೇಶ್ ಮಾತನಾಡುವಾಗ ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಕಲಾವಿದರ ಸಂಘದಲ್ಲಿ ನಡೆಯುತ್ತಿರುವ ಪೂಜೆ ದರ್ಶನ್ ಗಾಗಿ ಎಂಬ ಮಾತು ಕೇಳಿಬಂದಿತ್ತು.

ಇದಕ್ಕೆ ಸ್ಪಷ್ಟನೆ ನೀಡಿರುವ ರಾಕ್ ಲೈನ್ ವೆಂಕಟೇಶ್, ಇದು ದರ್ಶನ್ ಬಿಡುಗಡೆಗಾಗಿ ನಡೆಯುತ್ತಿರುವ ಪೂಜೆ ಅಲ್ಲ. ಕಳೆದ ಎರಡು ಮೂರು ತಿಂಗಳಿನಿಂದ ಕನ್ನಡ ಚಿತ್ರ ಸೋತಿದೆ, ಹಲವು ಹಿರಿಯರು ತೀರಿಕೊಂಡಿದ್ದಾರೆ. ಈ ಕಾರಣಕ್ಕೆ ಪೂಜೆ ಮಾಡೋಣವೆಂದು ನಟ ದೊಡ್ಡಣ್ಣ ಸಲಹೆ ನೀಡಿದ್ದರು. ಅದರಂತೆ ಪೂಜೆ ಮಾಡುತ್ತಿದ್ದೇವೆ. ದರ್ಶನ್ ಗಾಗಿ ಪೂಜೆ ಮಾಡುತ್ತಿದ್ದರೆ ಮನೆಯಲ್ಲಿಟ್ಟುಕೊಳ್ಳುತ್ತಿದ್ದೆ ಎಂದಿದ್ದಾರೆ.

ಅಷ್ಟೇ ಅಲ್ಲ, ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿರುವ ಅವರು ಒಂದು ವೇಳೆ ದರ್ಶನ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಚಿತ್ರರಂಗದ ಕುಟುಂಬದವರಿಂದ ಒಬ್ಬರ ಬಂಧನವಾಗಿದೆ. ಅದಕ್ಕಾಗಿ ಪೂಜೆ ಮಾಡಿಸುತ್ತಿದ್ದೇವೆ ಎಂದರೆ  ಆ ರೀತಿ ಅಲ್ಲ’ ಎಂದು ರಾಕ್ ಲೈನ್ ಮುಲಾಜಿಲ್ಲದೇ ಹೇಳಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ