ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪಿ.ಎನ್.ಸತ್ಯ ವಿಧಿವಶ

ಭಾನುವಾರ, 6 ಮೇ 2018 (07:15 IST)
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮೊದಲಬಾರಿ ನಾಯಕನಟನಾಗಿ ಅಭಿನಯಿಸಿದ್ದ ‘ಮೆಜೆಸ್ಟಿಕ್’ ಚಿತ್ರವನ್ನು ನಿರ್ದೇಶಿಸಿರುವ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪಿ.ಎನ್.ಸತ್ಯ ಅವರು ಶನಿವಾರ ಕೊನೆಯುಸಿರೆಳೆದಿದ್ದಾರೆ.

ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಮನೆಗೆ ಕರೆದುಕೊಂಡು ಬಂದಿದ್ದರು. ಆದರೆ ಶನಿವಾರ ಸಂಜೆ ಲೋ ಬಿಪಿ ಆದ ಕಾರಣ ಕೊನೆ ಉಸಿರೆಳೆದಿದ್ದಾರೆ.
 

ಮೆಜೆಸ್ಟಿಕ್, ಡಾನ್, ದಾಸ, ಸರ್ದಾರ, ಉಡೀಸ್, ಶಾಸ್ತ್ರೀ, ತಂಗಿಗಾಗಿ, ಗೂಳಿ, ಕೆಂಚ, ಹ್ಯಾಟ್ರಿಕ್ ಹೊಡಿ ಮಗ, ಸುಗ್ರೀವ, ಪಾಗಲ್, ಜೇಡರಹಳ್ಳಿ, ಶಿವಾಜಿನಗರ ಬೆಂಗಳೂರು ಅಂಡರ್‍ವಲ್ಡ್ ಮತ್ತು ಮರಿ ಟೈಗರ್ ಸೇರಿದಂತೆ 16 ಚಿತ್ರಗಳನ್ನು ಪಿ.ಎನ್.ಸತ್ಯ ನಿರ್ದೇಶಿಸಿದ್ದರು. ನಿರ್ದೇಶನ ಮಾತ್ರವಲ್ಲದೇ ಚಿತ್ರಗಳಲ್ಲಿ ನಟಿಸಿ ಕೂಡ ಸೈ ಅನ್ನಿಸಿಕೊಂಡಿದ್ದರು. ಮರಿ ಟೈಗರ್ ಸತ್ಯ ನಿರ್ದೇಶನದ ಕೊನೆಯ ಚಿತ್ರ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ