ಸಂಚಾರಿ ವಿಜಯ್ ಗಾಗಿ ಸ್ಯಾಂಡಲ್ ವುಡ್ ಪ್ರಾರ್ಥನೆ

ಸೋಮವಾರ, 14 ಜೂನ್ 2021 (10:25 IST)
ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿರುವ ನಟ ಸಂಚಾರಿ ವಿಜಯ್ ಬೇಗನೇ ಚೇತರಿಸಿಕೊಳ್ಳುವಂತೆ ಸ್ಯಾಂಡಲ್ ವುಡ್ ಪ್ರಾರ್ಥಿಸುತ್ತಿದೆ.


ಹೆಚ್ಚಿನ ನಟ-ನಟಿಯರು ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ವಿಜಯ್ ಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಅವರು ಬೇಗನೇ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ.  ಇನ್ನು, ವಿಜಯ್ ಆತ್ಮೀಯ ಗೆಳೆಯರಾದ ನಿರ್ದೇಶಕ ಮನಸೋರೆ, ನಟ ನೀನಾಸಂ ಸತೀಶ್ ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ನಟ ರಕ್ಷಿತ್ ಶೆಟ್ಟಿ, ನೆನಪಿರಲಿ ಪ್ರೇಮ್, ಅನಿರುದ್ಧ್, ನಟಿ ಆಶಿಕಾ ರಂಗನಾಥ್ ಸೇರಿದಂತೆ ಅನೇಕರು ವಿಜಯ್ ಬೇಗನೇ ಚೇತರಿಸಿಕೊಳ್ಳುವಂತೆ ಸಂದೇಶ ಬರೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ