ಚೋಮನದುಡಿ ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಅವರು ದೇವತಾ ಮನುಷ್ಯ, ಶಿವ ಮೆಚ್ಚಿದ ಕಣ್ಣಪ್ಪ, ಬಯಲುದಾರಿ, ಅರಿವು, ಫಲಿತಾಂಶ, ಅವಸ್ಥೆ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದರು. ಇತ್ತೀಚಿಗೆ ಕಿರುತೆರೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು. ಪದ್ಮಾ ಕುಮುಟಾ ನಿರ್ಮಿಸಿದ ಮಕ್ಕಳ ಚಿತ್ರ "ಅರಿವು" ರಾಷ್ಟ್ರ ಪ್ರಶಸ್ತಿ ಮತ್ತು ರಾಜ್ಯ ಪ್ರಶಸ್ತಿಯನ್ನು ಬಾಚಿಕೊಂಡಿತ್ತು.
ಅವರು ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ.
ಹಿರಿಯ ನಟಿಯ ಅಕಾಲಿಕ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.