ದರ್ಶನ್‌ಗೆ ಟೀ ಪಾರ್ಟಿ ಆಯೋಜಿಸಿದ್ದ ವಿಲ್ಸನ್ ಗಾರ್ಡನ್ ಕಲಬುರಗಿ ಜೈಲಿಗೆ ಶಿಫ್ಟ್‌

Sampriya

ಮಂಗಳವಾರ, 17 ಸೆಪ್ಟಂಬರ್ 2024 (20:01 IST)
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್‌ಗೆ ಟೀ ಪಾರ್ಟ್ ಆಯೋಜಿಸಿದ್ದ ಕೈದಿ ವಿಲ್ಸನ್ ಗಾರ್ಡನ್ ನಾಗನನ್ನು ಇಂದು ಕಲಬುರಗಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ  ರಾಜಾಥಿತ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಲ್ಸನ್ ಗಾರ್ಡನ್‌ನನ್ನು ಸ್ಥಳಾಂತರಿಸಲಾಗಿದೆ.

ಇನ್ನೂ ವಿಲ್ಸನ್ ಗಾರ್ಡನ್ ಆಯೋಜಿಸಿದ್ದ ಟೀ ಪಾರ್ಟಿಯಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2ಆರೋಪಿ ದರ್ಶನ್ ಹಾಗೂ ನಾಗರಾಜ್ ಪಾಲ್ಗೊಂಡಿದ್ದರು. ಈ ವೇಳೆ ಸಿಗರೇಟ್‌ನೊಂದಿಗೆ ದರ್ಶನ್ ಟೀ ಕಫ್ ಹಿಡಿದಿದ್ದರು. ಈ ಫೋಟೋ ಬಿಡುಗಡೆಯಾದ ಹೊರಬಿದ್ದ ಬೆನ್ನಲ್ಲೇ ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆ ಬಗ್ಗೆ ಭಾರೀ ಚರ್ಚೆಯಾಯಿತು.

ಈಚೆಗೆ ಸಿಸಿಬಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ ವಿಲ್ಸನ್ ಗಾರ್ಡ್‌ನಿಂದ ಮೊಬೈಲ್‌ ವಶಕ್ಕೆ ಪಡೆದಿದ್ದರು. ಇದಾದ ಬೆನ್ನಲ್ಲೇ ವಿಲ್ಸನ್ ಗಾರ್ಡನ್ ನಾಗನನ್ನು  ಪರಪ್ಪನ ಅಗ್ರಹಾರ ಜೈಲಿನಿಂದ ಕಲಬುರಗಿ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್‌ ಆದೇಶ ಪ್ರಕಟಿಸಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಸಿದ್ದಪುರ ಮಹೇಶ್‌ನನ್ನ ನಾಗ ತಂಡ ಕೊಚ್ಚಿ ಕೊಲೆ ಮಾಡಿತ್ತು. ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗಡೆ ಬಂದ ಕೇವಲ ಇನ್ನೂರು ಮೀಟರ್ ಅಂತರದಲ್ಲೇ ಸಿದ್ದಪುರ ಮಹೇಶನನ್ನು ಆರೋಪಿಗಳು ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಬರೋಬ್ಬರಿ ಇಪ್ಪತ್ತು ಜನರನ್ನು ಬಂಧನ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ