ಅರಮನೆ ಮೈದಾನದಲ್ಲಿ ಶಿವಣ್ಣ ರಕ್ತದಾನ

ಮಂಗಳವಾರ, 9 ನವೆಂಬರ್ 2021 (13:41 IST)
ಬೆಂಗಳೂರು : ಪುನೀತ್ ರಾಜ್ಕುಮಾರ್ ಅಗಲಿ ಇಂದಿಗೆ 12 ದಿನಗಳಾಗಿವೆ. ಈ ಕಾರಣಕ್ಕೆ ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡುತ್ತಿದೆ.
ಪುನೀತ್ ರಾಜ್ಕುಮಾರ್ ಹೆಸರಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ನಟ ಶಿವರಾಜ್ಕುಮಾರ್ ಅಭಿಮಾನಿಗಳಿಗೆ ಊಟ ಬಡಿಸಿದ್ದಾರೆ. ಆ ಬಳಿಕ ಶಿವಣ್ಣ ರಕ್ತದಾನ ಮಾಡಿದ್ದಾರೆ.
ಪುನೀತ್ ಆಸೆ ಈ ರೀತಿ ನೆರವೇರಬೇಕೆಂದು ದೇವರ ಇಚ್ಛೆ ಇತ್ತು ಎಂದು ಅನಿಸುತ್ತದೆ. ಅಪ್ಪುನಂತಹ ತಮ್ಮನನ್ನು ಪಡೆಯಲು ನಾನು ಪುಣ್ಯ ಮಾಡಿದ್ದೆ. ಬಲಗೈಯಲ್ಲಿ ಮಾಡಿದ್ದು, ಎಡಗೈಗೆ ಗೊತ್ತಾಗಬಾರದು. ಅದನ್ನೇ ನಾವೆಲ್ಲರೂ ಅನುಸರಿಸಬೇಕು. ಇಂದು ಎಲ್ಲರಿಗೂ ಉಟದ ವ್ಯವಸ್ಥೆ ಆಗುತ್ತಿದೆ. ಎಲ್ಲರೂ ನಿಧಾನವಾಗಿ ಬಂದು ಊಟ ಮಾಡಿಕೊಂಡು ಹೋಗಿ. ನವೆಂಬರ್ 16ರಂದು ಚಿತ್ರರಂಗದಿಂದ ಕಾರ್ಯಕ್ರಮ ನಡೆಯುತ್ತಿದೆ ಎಂದು ಅರಮನೆ ಮೈದಾನದಲ್ಲಿ ನಟ ಶಿವರಾಜ್‌ಕುಮಾರ್ ಹೇಳಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ