ಇವತ್ತು ಶಿವಣ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್

ಗುರುವಾರ, 8 ಅಕ್ಟೋಬರ್ 2015 (13:04 IST)
ಲಘು ಹೃದಯಾಘಾತಕ್ಕೆ ಒಳಗಾಗಿ ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಾ. ಶಿವರಾಜ್ ಕುಮಾರ್ ವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಶಿವಣ್ಣ ಆರೋಗ್ಯ ಸುಧಾರಿಸಿರೋದರಿಂದ ಅವರು ಇವತ್ತು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದದಾರೆ.
ಇನ್ನು ನಿನ್ನೆ ಸ್ವತಃ ಶಿವಣ್ಣ ಅವರೇ ಮಾಧ್ಯಮಗಳೊಂದಿಗೆ ಮಾತನಾಡಿದ ತಾನು ಆರಾಮವಾಗಿದ್ದು, ಯಾರೂ ಆತಂಕ ಪಡೋದು ಬೇಡ ಎಂದಿದ್ದರು. ಇನ್ನು ಶಿವರಾಜ್ ಕುಮಾರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಮಲ್ಯ ಆಸ್ಪತ್ರೆಯ ವೈದ್ಯ ಶ್ರೀನಿವಾಸ್ ಅವರು ಕೂಡ ಶಿವಣ್ಣ ಆರೋಗ್ಯವಾಗಿದ್ದಾರೆಂದು ತಿಳಿಸಿದ್ದಾರೆ.
 
ನಿನ್ನೆ ಸಹ ಕೆಲ ನಟ ನಟಿಯರು ಕೂಡ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ರು. ಇವತ್ತು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಶಿವಣ್ಣ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.ಬಳಿಕ ಶೂಟಿಂಗ್ ನಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ