ಕುಮಾರ್ ಬಂಗಾರಪ್ಪ ಹೇಳಿಕೆಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ ಏನು ಗೊತ್ತಾ?

ಶನಿವಾರ, 13 ಏಪ್ರಿಲ್ 2019 (09:24 IST)
ಬೆಂಗಳೂರು: ಚುನಾವಣೆ ಪ್ರಚಾರ ವಿಚಾರದಲ್ಲಿ ಕುಮಾರ್ ಬಂಗಾರಪ್ಪ ತಮ್ಮ ಬಗ್ಗೆ ನೀಡಿದ ಹೇಳಿಕೆಗೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.


ಶಿವಮೊಗ್ಗ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಒಳ್ಳೆಯ ಮನುಷ್ಯ ಎಂದು ಶಿವರಾಜ್ ಕುಮಾರ್ ಹೇಳಿದ್ದಕ್ಕೆ ಸಹೋದರ, ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಆಕ್ಷೇಪ ವ್ಯಕ್ತಪಡಿಸಿ, ಶಿವರಾಜ್ ಕುಮಾರ್ ‘ಕವಚ’ ತೆಗೆದಿಟ್ಟು ಪ್ರಚಾರಕ್ಕೆ ಬರಲಿ ಎಂದು ಲೇವಡಿ ಮಾಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಶಿವರಾಜ್ ಕುಮಾರ್ ‘ಅದೆಲ್ಲಾ ಅವರವರ ಅಭಿಪ್ರಾಯ. ಎಲ್ಲರಿಗೂ ಅಭಿಪ್ರಾಯ ಹೇಳುವ ಹಕ್ಕಿದೆ. ಅದರ ಬಗ್ಗೆ ನಾನು ಹೆಚ್ಚು ತಲೆಕೆಡಿಸಿಕೊಳ್ಳಲ್ಲ’ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ