ಪಾದಯಾತ್ರೆಗೆ ಚಾಲನೆ ನೀಡಲಿರುವ ಶಿವಣ್ಣ: ಸ್ಯಾಂಡಲ್ ವುಡ್ ಕಲಾವಿದರು ಭಾಗಿ

ಭಾನುವಾರ, 9 ಜನವರಿ 2022 (08:58 IST)
ಬೆಂಗಳೂರು: ಕಾಂಗ್ರೆಸ್ ನೇತೃತ್ವದಲ್ಲಿ ನಡೆಯಲಿರುವ ಮೇಕೆದಾಟು ಪಾದಯಾತ್ರೆಗೆ ಸ್ಯಾಂಡಲ್ ವುಡ್ ಕಲಾವಿದರು ಸಾಥ್ ಕೊಡಲಿದ್ದಾರೆ.

ಮೇಕೆದಾಟು ಯೋಜನೆಗೆ ಒತ್ತಾಯಿಸಿ ನಡೆಯುತ್ತಿರುವ ಪಾದಯಾತ್ರೆಗೆ ನಟ ಶಿವರಾಜ್ ಕುಮಾರ್ ಚಾಲನೆ ನೀಡುತ್ತಿದ್ದಾರೆ. ಅವರ ಜೊತೆಗೆ ಕೆಲವು ಸ್ಯಾಂಡಲ್ ವುಡ್ ಕಲಾವಿದರೂ ಭಾಗಿಯಾಗಲಿದ್ದಾರೆ.

ಈಗಾಗಲೇ ಡಿ.ಕೆ. ಶಿವಕುಮಾರ್ ಕರ್ನಾಟಕ ವಾಣಿಜ್ಯ ಮಂಡಳಿಯ ಬೆಂಬಲ ಕೋರಿದ್ದರು. ಅದರಂತೆ ನಟ ಮುಖ್ಯಮಂತ್ರಿ ಚಂದ್ರು, ಸಾಧುಕೋಕಿಲ ಸೇರಿದಂತೆ ಅನೇಕರು ಪಾದಯಾತ್ರೆ ಬೆಂಬಲಿಸುವುದಾಗಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ