ಯೋಗೇಶ್ ,ಹಿತಾಚಂದ್ರಶೇಖರ್ ಜೊತೆಗೆ ಗಿರೀಶ್ ಕಾರ್ನಾಡ್, ಸಿಹಿಕಹಿ ಚಂದ್ರು, ಕರಿಸುಬ್ಬು, ಕ್ರಿಶ್, ಅಪೇಕ್ಷ, ಪಾಯಲ್ ಗುಪ್ತ ಮುಂತಾದವರು ನಟಿಸುತ್ತಿದ್ದಾರೆ.
ಉಮಾರಾವ್ ಅವರು ಬರೆದಿರುವ ಕಥೆಗೆ ಪ್ರತಿಭಾನಂದಕುಮಾರ್ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪ್ರತಿಭಾ ಅವರೇ ಸಂಭಾಷಣೆಯ ಹೊಣೆ ಹೊತ್ತಿದ್ದಾರೆ. ವೀರಸಮರ್ಥ್ ಸಂಗೀತ ನಿರ್ದೇಶನ, ಸುರೇಶ್ ಸಂಕಲನ, ಅದ್ವೈತ ಛಾಯಾಗ್ರಹಣ ವಸಂತ ಕುಲಕರ್ಣಿ ಕಲಾ ನಿರ್ದೇಶನ, ಎನ್.ಕೆ.ಲೀನ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದ್ದು, ಯೋಗರಾಜ್ ಭಟ್, ಗೋಪಾಲ ವಾಜಪೇಯಿ ಹಾಗೂ ಪ್ರತಿಭಾನಂದಕುಮಾರ್ ಹಾಡುಗಳನ್ನು ಬರೆದಿದ್ದಾರೆ.