ಈ ವಾರ ಹೆಬ್ಬುಲಿ ಚಿತ್ರೀಕರಣದಲ್ಲಿ ಭಾಗಿಯಾಗಲಿರುವ ಸುದೀಪ್

ಮಂಗಳವಾರ, 12 ಜುಲೈ 2016 (09:02 IST)
ಮೊನ್ನೆ ತಾನೇ ಹೆಬ್ಬುಲಿ ಸಿನಿಮಾದ ಶೂಟಿಂಗ್ ವೇಳೆ ಅಸಿಡಿಟಿ ಸಮಸ್ಯೆಯಿಂದಾಗಿ ಕಿಚ್ಚ ಸುದೀಪ್ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಇದರಿಂದಾಗಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಬಳಿಕ ಡಿಸ್ಚಾರ್ಜ್ ಮಾಡಲಾಗಿತ್ತು. ಕಿಚ್ಚ ಕಳೆದ ಒಂದು ವಾರದಿಂದ ಮನೆಯಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಈ ವಾರದಲ್ಲಿ ಮತ್ತೆ ಅವರು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರಂತೆ.

 
ಹೌದು...ಒಂದು ವಾರದಿಂದ ವಿಶ್ರಾಂತಿ ಪಡೆಯುತ್ತಿದ್ದ ಸುದೀಪ್ ಆರೋಗ್ಯದಲ್ಲಿ ಇದೀಗ ಚೇತರಿಕೆ ಕಂಡು ಬಂದಿರೋದರಿಂದ ಸುದೀಪ್ ಅವರು ಈ ವಾರ ಮತ್ತೆ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಮೊನ್ನೆ ಮೈಸೂರಿನಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಸುದೀಪ್ ಅವರಿಗೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡಿತ್ತು.ಹಾಗಾಗಿ ಸಿನಿಮಾದ ಶೂಟಿಂಗ್ ರದ್ದುಗೊಳಿಸಲಾಗಿತ್ತು.ಆದ್ರೀಗ ಸುದೀಪ್ ಚೇತರಿಸಿಕೊಂಡಿರೋದರಿಂದ ಸಿನಿಮಾದ ಶೂಟಿಂಗ್ ಮತ್ತೆ ಆರಂಭವಾಗಲಿದೆ.
 
ಹೆಬ್ಬುಲಿ ಸಿನಿಮಾದಲ್ಲಿ ಕಿಚ್ಚ ಸುದೀಪ್ ಅವರು ಇದೇ ಮೊದಲ ಬಾರಿಗೆ ಅರ್ಮಿ ಆಫೀಸರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮುಂಗಾರು ಮಳೆಯ ಛಾಯಾಗ್ರಾಹಕ ಮತ್ತು ಗಜಕೇಸರಿ ಮೂಲಕ ಆಕ್ಷನ್ ಕಟ್  ಹೇಳಿದ ಕೃಷ್ಣ ಅವರಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ