Darshan Thoogudeepa: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್: ಮತ್ತೆ ಜೈಲಿಗೆ ದಾಸ
ಕರ್ನಾಟಕ ಹೈಕೋರ್ಟ್ ಪ್ರಮುಖ ಆರೋಪಿಗಳಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಮೇಲ್ಮನವಿ ಸಲ್ಲಿಸಿದ್ದರು. ಈಗಾಗಲೇ ಸುಪ್ರೀಂಕೋರ್ಟ್ ಎರಡೂ ಕಡೆ ವಕೀಲರ ವಾದ-ವಿವಾದ ಆಲಿಸಿದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು.
ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಪ್ರಮುಖ ಆರೋಪಿಗಳ ಹಿನ್ನಲೆ ಕೇಳಿತ್ತು. ಬಳಿಕ ಹೈಕೋರ್ಟ್ ಮಾಡಿದ ತಪ್ಪನ್ನು ನಾವು ಮಾಡಲ್ಲ ಎಂದು ಹೇಳಿತ್ತು. ಇಂದು ತೀರ್ಪು ನೀಡಿದ ಸುಪ್ರೀಂಕೋರ್ಟ್ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದಿದ್ದು ಜಾಮೀನು ರದ್ದುಗೊಳಿಸಿದೆ.