ಬೆಂಗಳೂರು: ಸಹಕಲಾವಿದೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಜೈಲು ಸೇರಿದ್ದ ನಟ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಇಂದು ಜಾಮೀನು ಮೂಲಕ ಹೊರಬಂದಿದ್ದಾರೆ.
ಬಿಡುಗಡೆ ಬಳಿಕ ಮಾಧ್ಯಮದವರ ಮುಂದೆ ಮಾತನಾಡಿದ ಅವರು ಶಿವಣ್ಣ, ದರ್ಶನ್ ಹಾಗೂ ಧ್ರುವ ಸರ್ಜಾ ಬಗ್ಗೆ ಮಾತನಾಡಿರುವ ಆಡಿಯೋ ನನ್ನದಲ್ಲ. ನಾನು ಮೊದಲು ಶಿವಣ್ಣ ಅವರನ್ನು ಭೇಟಿ ಮಾಡಿ ಅವರಿಗೆ ನಡೆದ ಎಲ್ಲಾ ಘಟನೆಯನ್ನು ತಿಳಿಸುತ್ತೇನೆ. ಕಳೆದ ಮೂರು ವರ್ಷಗಳ ಶ್ರಮವನ್ನು ಹಾಳು ಮಾಡಿದ್ದಾರೆ. ಐದಾರು ಮಂದಿ ಸೇರಿಕೊಂಡು ನನ್ನ ಮೇಲೆ ಪ್ಲಾನ್ ಮಾಡಿ ಈ ರೀತಿ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಿನಿಮಾ ಬಿಡುಗಡೆಗೂ ಮುನ್ನಾವೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿದೆವೂ. ಪ್ರತಿ ಹಮತದಲ್ಲೂ ತನ್ನ ವಿರುದ್ಧ ಷಡಂತ್ಯ ನಡೆದಿದೆ. ಸಿನಿಮಾ ರಿಲೀಸ್ಗೂ ಮೊದಲೇ ಕುಣಿಗಲ್ ಬಳಿ ಮೊಟ್ಟೆ ಹೊಡೆದಿದ್ದಾರೆ. ನನ್ನ ಮೇಲೆ ಹಲ್ಲೆ ನಡೆಸಿ ಬಟ್ಟೆಗಳನ್ನು ಹರಿದಿದ್ದಾರೆ. ಅವರೇ ನನ್ನ ಮೇಲೆ ಪ್ರಕರಣವನ್ನು ದಾಖಲಿಸಿದ್ದಾರೆ ಎಂದರು.
ಅತ್ಯಾಚಾರ ಕೇಸ್ನಲ್ಲಿ ಕಾನೂನು ಹೋರಾಟ ಮಾಡುತ್ತೇನೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಮನು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.