ದುನಿಯಾ ವಿಜಯ್ ಗೆ ನಿರೀಕ್ಷಣಾ ಜಾಮೀನು ನೀಡಿದ ಸಿಸಿಎಚ್ 65 ನೇ ನ್ಯಾಯಾಲಯ

ಶನಿವಾರ, 9 ಜೂನ್ 2018 (05:52 IST)
ಬೆಂಗಳೂರು : 'ಮಾಸ್ತಿಗುಡಿ' ಚಿತ್ರದ ಚಿತ್ರೀಕರಣವೇಳೆ ಇಬ್ಬರು ಸಹನಟರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಚಿತ್ರದ ನಿರ್ಮಾಪಕ ಸುಂದರ ಗೌಡ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ನಟ ದುನಿಯಾ ವಿಜಯ್ ಅವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.


ಬಂಧನದ ಭೀತಿಯಿಂದ ತಪ್ಪಿಸಿಕೊಂಡಿದ್ದ ನಟ ದುನಿಯಾ ವಿಜಯ್ ಅವರನ್ನು ಶುಕ್ರವಾರ ಬೆಳಿಗ್ಗೆ ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ ಬಂಧನ ಪ್ರಕ್ರಿಯೆಗೂ ಮುನ್ನವೇ ದುನಿಯಾ ವಿಜಯ್‍ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಸಿಸಿಎಚ್ 65 ನೇ ನ್ಯಾಯಾಲಯ ಒಬ್ಬರ ಶ್ಯೂರಿಟಿ ಮತ್ತು 50 ಸಾವಿರ ಬಾಂಡ್ ಶರತ್ತು ವಿಧಿಸಿ ಜಾಮೀನು ನೀಡಿದೆ. ದುನಿಯಾ ವಿಜಯ್ ಬಂಧನವಾಗಿದ್ದರೂ ಬಿಡುಗಡೆಗೊಳಿಸುವಂತೆ ಕೋರ್ಟ್ ಆದೇಶಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ