ನಟ ದರ್ಶನ್ ಹೆಸರಿನ ನಕಲಿ ಫೇಸ್ ಬುಕ್ ಖಾತೆಯಲ್ಲಿ ಸಿಎಂಗೆ ಅವಮಾನ ಮಾಡಿದ ಕಿಡಿಗೇಡಿಗಳು

ಬುಧವಾರ, 13 ಜೂನ್ 2018 (06:36 IST)
ಬೆಂಗಳೂರು : ಕನ್ನಡ ಸಿನಿಮಾ ರಂಗದಲ್ಲಿ ಸಾಕಷ್ಟು ಹೆಸರು ಮಾಡಿ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಸ್ಯಾಂಡಲ್ ವುಡ್ ನ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೆಸರನ್ನು ಯಾರೋ ಕಿಡಿಗೇಡಿಗಳು ದುರಪಯೋಗ ಪಡಿಸಿಕೊಂಡಿದ್ದಾರೆ.


ಹೌದು. ನಟ ದರ್ಶನ್ ಅವರ  ಹೆಸರಲ್ಲಿ ಯಾರೋ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಸಿಎಂ ಕುಮಾರಸ್ವಾಮಿ ಅವರ  ವಿರುದ್ಧ ಅವಹೇಳನಕಾರಿ ಪೊಸ್ಟ್ ಮಾಡಿದ್ದಾರೆ. 'ಈ ಸಲ ಕಪ್ಪು ನಮ್ದೇ, ಕಪ್ಪು ನಮ್ದೇ ಎಂದು ಹೇಳುತ್ತಿದ್ದವರು, ಈ ಕಪ್ಪು ಇದೇ ಎಂದು ಹೇಳೊಕೇನಾಗಿತ್ತು' ಎಂದು ನಟ ದರ್ಶನ್ ಹೆಸರಲ್ಲಿ ಸಿಎಂ ಕುಮಾರಸ್ವಾಮಿ ವಿರುದ್ದ ಅವಹೇಳನಕಾರಿ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಈ ಬಗ್ಗೆ ಅಖಿಲ ಕರ್ನಾಟಕ ಕುಮಾರಸ್ವಾಮಿ ಅಭಿಮಾನಿಗಳ ಸಂಘವು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಗೆ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ