ಬೆಂಗಳೂರು: ನಿರ್ದೇಶಕ ವಿನೋದ್ ದೊಂಡಾಲೆ ನಿಧನದ ನಂತರ ದಿ ರೈಸ್ ಆಫ್ ಅಶೋಕ ಸಿನಿಮಾ ಮುಗಿದೇ ಹೋಯಿತು ಎಂದು ಸುದ್ದಿಯಾಗಿದ್ದ ಸಿನಿಮಾ ಇದೀಗ ಚಿತ್ರೀಕರಣ ಮುಕ್ತಾಯಗೊಂಡಿದೆ.
ನಿರ್ದೇಶಕ ವಿನೋದ್ ದೊಂಡಾಲೆ ನಿಧನದ ನಂತರ ಅಶೋಕ ಬ್ಲೇಡ್ ಸಿನಿಮಾ ನಿಂತೇ ಹೋಯಿತು ಎಂದು ಸುದ್ದಿ ಹರಡಿತ್ತು. ಆದರೆ ನಟ ಸತೀಶ್ ನೀನಾಸಂ ಅವರು ದಿ ರೈಸ್ ಆಫ್ ಅಶೋಕ ಹೆಸರಿನಲ್ಲಿ ಆ ಪ್ರಾಜೆಕ್ಟ್ ಅನ್ನು ಮತ್ತೆ ಕೈಗೆತ್ತಿಕೊಂಡು ಯಶಸ್ವಿಯಾಗಿ ಶೂಟಿಂಗ್ ಮುಗಿಸಿದ್ದಾರೆ.
ಅಭಿನಯ ಚತುರ ಸತೀಶ್ ನೀನಾಸಂ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ, ಟೈಟಲ್ ಹಾಗೂ ಒಂದಷ್ಟು ಪೋಸ್ಟರ್ ಮೂಲಕವೇ ಕುತೂಹಲ ಹೆಚ್ಚಿಸಿದೆ. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ.
ಸತೀಶ್ ನೀನಾಸಂ ದಿ ರೈಸ್ ಆಫ್ ಅಶೋಕ ಸಿನಿಮಾದಲ್ಲಿ ಕ್ರಾಂತಿಕಾರಿ ಯುವಕನ ಪಾತ್ರ ಪೋಷಣೆ ಮಾಡಿದ್ದಾರೆ. 70ರ ದಶಕದಲ್ಲಿ ನಡೆಯುವ ಕಥೆಯು ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಕುರಿತು ಬೆಳಕು ಚೆಲ್ಲಲಿದೆ
ಈ ಸಿನಿಮಾದಲ್ಲಿ ಸತೀಶ್ ಅವರಿಗೆ ಜೋಡಿಯಾಗಿ ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ಅವರು ಜೋಡಿಯಾಗಿದ್ದಾರೆ. ಬಿ.ಸುರೇಶ್, ರವಿಶಂಕರ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರಿಯಾ ಹಾಗೂ ಯಶ್ ಶೆಟ್ಟಿ, ಡ ಗನ್ ಮಂಜು, ವಿಕ್ರಮ್ ವೇದ ಖ್ಯಾತಿಯ ಹರೀಶ್ ಪೆರಾಡಿ ತಾರಾಬಳಗದಲ್ಲಿದ್ದಾರೆ.