ಇಂದು ಅಪ್ಪಂದಿರ ದಿನ: ತಂದೆಯನ್ನು ನೆನೆದು ಭಾವುಕ ಪೋಸ್ಟ್‌ ಹಾಕಿದ ವಿನೀಶ್‌ ದರ್ಶನ್‌

Sampriya

ಭಾನುವಾರ, 16 ಜೂನ್ 2024 (11:45 IST)
Photo Courtesy X
ಬೆಂಗಳೂರು: ಇಂದು ವಿಶ್ವ ಅಪ್ಪಂದಿರ ದಿನ. ಹೀಗಾಗಿ, ಕೊಲೆ ಪ್ರಕರಣವೊಂದರಲ್ಲಿ ಸಿಲುಕಿ  ಪೊಲೀಸ್ ಕಸ್ಟಡಿಯಲ್ಲಿರುವ ತಮ್ಮ ತಂದೆ ದರ್ಶನ್  ಅವರನ್ನು ನೆನೆದು, ಪುತ್ರ ವಿನೀಶ್ ದರ್ಶನ್‌ ಇನ್​​ಸ್ಟಾಗ್ರಾಂನಲ್ಲಿ ಭಾವುಕವಾಗಿ ಸಂದೇಶ ಹಂಚಿಕೊಂಡಿದ್ದಾರೆ.

ದರ್ಶನ್​ ಮತ್ತು ತಾಯಿ ವಿಜಯಲಕ್ಷ್ಮೀ ಜೊತೆಗಿನ ಫೋಟೋವನ್ನು ವಿನೀಶ್ ಹಂಚಿಕೊಂಡು, ವಿಶ್ವ ಅಪ್ಪಂದಿರ ದಿನದ ಶುಭಾಶಯ ಕೋರಿದ್ದಾರೆ.

ನಿಮ್ಮನ್ನ ನಾನು ಮಿಸ್ ಮಾಡಿಕೊಳುತ್ತಿದ್ದೇನೆ. ನಿಮ್ಮನ್ನು ನಾನು ಅಪಾರವಾಗಿ ಪ್ರೀತಿಸುತ್ತಿದ್ದೇನೆ. ಯಾವತ್ತಿಗೂ ನೀವೇ ನನ್ನ ಹೀರೋ ಅಪ್ಪ ಎಂದು ವಿನೀಶ್ ಬರೆದುಕೊಂಡಿದ್ದಾರೆ.

ಮೂರು ದಿನಗಳ ಹಿಂದೆಯೂ ವಿನೀಶ್‌ ಪೋಸ್ಟ್‌ ಮಾಡಿದ್ದರು. ನನ್ನ ತಂದೆಯ ಬಗ್ಗೆ ಮಾಡಲಾಗಿರುವ ಎಲ್ಲಾ ಆಕ್ಷೇಪಾರ್ಹ ಕಮೆಂಟ್​ಗಳಿಗೆ ಧನ್ಯವಾದಗಳು. ನನಗೆ 15 ವರ್ಷ, ನನಗೂ ಮನಸಿದೆ. ನನಗೂ ಭಾವನೆಗಳಿದೆ ಎಂಬುದನ್ನು ಮರೆತು ಕಮೆಂಟ್​ ಮಾಡಿದ್ದೀರಿ. ಈ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ಕಷ್ಟದ ಸಮಯದಲ್ಲಿಯೂ ನನ್ನನ್ನು ಶಪಿಸುವುದರಿಂದ ನೀವೆಲ್ಲರೂ ಬದಲಾಗುವುದಿಲ್ಲ ಎಂದು ಬರೆದುಕೊಂಡಿದ್ದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು ಪೊಲೀಸ್‌ ಕಸ್ಟಡಿಯಲ್ಲಿ ವಿಚಾರಣೆ ನಡೆಯುತ್ತಿದೆ.

ಶನಿವಾರ ದರ್ಶನ್ ಮತ್ತು ಗ್ಯಾಂಗ್‌ ಅನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಮತ್ತೆ ಐದು ದಿನಗಳ ಕಾಲ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ