ಅಮ್ಮನ ಹೆಗಲು ಹಿಡಿದು ಅಪ್ಪ ದರ್ಶನ್‌ ನೋಡಲು ಜೈಲಿಗೆ ಬಂದ ವಿನೀಶ್

Sampriya

ಗುರುವಾರ, 3 ಅಕ್ಟೋಬರ್ 2024 (17:02 IST)
ಬಳ್ಳಾರಿ: ನಟ ದರ್ಶನ್‌ರನ್ನು ನೋಡಲು ಬಳ್ಳಾರಿ ಜೈಲಿಗೆ ಪುತ್ರ ವಿನೀಶ್ ಮೊದಲ ಬಾರಿ ತಾಯಿ ಜತೆ ಆಗಮಿಸಿದ್ದಾನೆ.

ವಿಐಪಿ ಟ್ರೀಟ್‌ಮೆಂಟ್ ಪಡೆದ ಹಿನ್ನೆಲೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪರಪ್ಪನ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಸಂದರ್ಭ ವಿನೇಶ್ ತನ್ನ ತಾಯಿ ಜತೆ ಹಲವು ಬಾರಿ ಅಪ್ಪನನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದ.

ಆದರೆ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ಮೊದಲ ಬಾರಿ ವಿನೇಶ್ ಅಪ್ಪನನ್ನು ನೋಡಲು ಬಂದಿದ್ದಾನೆ. ಸೋಮವಾರ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ್, ಆಪ್ತ ಧನ್ವೀರ್ ಅವರು ದರ್ಶನ್ ಭೇಟಿಯಾಗಿ ಅವರು ಮಾತುಕತೆ ನಡೆಸಿದ್ದರು.

ಅದರ ಬೆನ್ನಲ್ಲೇ ಇದೀಗ ಮಗನ ಜತೆ ವಿಜಯಲಕ್ಷ್ಮೀ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ