ವಿಕ್ರಾಂತ್ ರೋಣ ಮೆಚ್ಚಿಕೊಂಡ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್

ಸೋಮವಾರ, 4 ಏಪ್ರಿಲ್ 2022 (09:30 IST)
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ವಿಕ್ರಾಂತ್ ರೋಣ ಸಿನಿಮಾ ಟೀಸರ್ ಯುಗಾದಿ ಹಬ್ಬಕ್ಕೆ ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆದಿತ್ತು.

ಈ ಸಿನಿಮಾದ ಟೀಸರ್ ವೀಕ್ಷಿಸಿದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ವಿಕ್ರಾಂತ್ ರೋಣ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ಅಲ್ಲದೆ ಸುದೀಪ್ ಗೂ ಶುಭ ಹಾರೈಸಿದ್ದಾರೆ.

ಕ್ರಿಕೆಟ್ ಪ್ರಿಯರಾಗಿರುವ ಕಿಚ್ಚ ಸುದೀಪ್ ಗೆ ಸೆಹ್ವಾಗ್ ಜೊತೆ ಉತ್ತಮ ಸ್ನೇಹ ಸಂಬಂಧವಿದೆ. ಇದೇ ಕಾರಣಕ್ಕೆ ವಿಕ್ರಾಂತ್ ರೋಣ ಸಿನಿಮಾ ಟೀಸರ್ ಬಗ್ಗೆ ಸೆಹ್ವಾಗ್ ಮೆಚ್ಚುಗೆಯ ಮಾತನಾಡಿದ್ದಾರೆ. ಜುಲೈ 28 ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ