ನಿಜಜೀವನದಲ್ಲಿ ಸೃಷ್ಟಿಸಿದ ನಾವು ತಪ್ಪಿತಸ್ಥರು: ದರ್ಶನ ಬಂಧನಕ್ಕೆ ಚೇತನ್‌ ಪ್ರತಿಕ್ರಿಯೆ

Sampriya

ಬುಧವಾರ, 12 ಜೂನ್ 2024 (14:23 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಈ ಕುರಿತಂತೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಪ್ರತಿಕ್ರಿಯಿಸಿದ್ದಾರೆ.

ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ.

ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂದು ಹೇಳಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಹಾಗೂ ಅವರ ಆಪ್ತೆ ಪವಿತ್ರಾಗೌಡ ಸೇರಿ 13 ಆರೋಪಿಗಳ ವಿಚಾರಣೆ ಮುಂದುವರಿದಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ