ಅಲ್ಲು ಅರ್ಜುನ್ ಮೇಲೆ ಪವನ್ ಕಲ್ಯಾಣ ಅಭಿಮಾನಿಗಳು ಕೆಂಡಕಾರಿದ್ದೇಕೆ?

ಶನಿವಾರ, 10 ಏಪ್ರಿಲ್ 2021 (13:17 IST)
ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ‘ವಕೀಲ್ ಸಾಬ್’ ಚಿತ್ರವನ್ನು ನಿರ್ಲಕ್ಷಿಸಿದ್ದಕ್ಕಾಗಿ ಪವನ್ ಕಲ್ಯಾಣ್ ಅಭಿಮಾನಿಗಳು ನಟ ಅಲ್ಲು ಅರ್ಜುನ್ ಅವರ ಮೇಲೆ ಕೋಪಗೊಂಡಿದ್ದಾರೆ.

ಹೌದು ಅಲ್ಲು ಅರ್ಜುನ್ ಅವರ ಪುಷ್ಪಾ ಚಿತ್ರದ ಟೀಸರ್ ಅವರ ಹುಟ್ಟುಹಬ್ಬದ ಹಿಂದಿನ ದಿನದಂದು ರಿಲೀಸ್ ಮಾಡಲಾಗಿತ್ತು. ಆ ವೇಳೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡದ  ನಟ ಅಲ್ಲು ಅರ್ಜುನ್ ಅವರು ಜನಪ್ರಿಯತೆ ಗಳಿಸಿದಂತಹ ತೆಲುಗು ಚಿತ್ರಗಳಿಗೆ ಮತ್ತು ಬಾಹುಬಲಿ, ಕೆಜಿಎಫ್ ನಂತಹ ಸೂಪರ್ ಹಿಟ್ ಚಿತ್ರಗಳ ಯಶಸ್ವಿನ ಬಗ್ಗೆ ಮಾತನಾಡಿದ್ದಾರೆ.

ಆದರೆ ಏಪ್ರಿಲ್ 9ರಂದು ಬಿಡುಗಡೆಯಾಗುತ್ತಿರುವ ಪವನ್ ಕಲ್ಯಾಣ್ ಅಭಿನಯದ ‘ವಕೀಲ್ ಸಾಬ್’ ಚಿತ್ರಕ್ಕೆ ವಿಶ್ ಮಾಡದೆ ನಿರ್ಲಕ್ಷಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ  ಪವನ್ ಕಲ್ಯಾಣ್ ಅಭಿಮಾನಿಗಳು ಅಲ್ಲು ಅರ್ಜುನ್ ಅವರ ಮೇಲೆ ಕೆಂಡಕಾರಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ