ಆಷಾಢದ ನಂತರ ಸಚಿವ ಸಂಪುಟ ವಿಸ್ತರಣೆ: ಈಶ್ವರಪ್ಪ

ಬುಧವಾರ, 6 ಜುಲೈ 2011 (13:36 IST)
PR
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ, ಆಷಾಢದ ನಂತರ ಸಂಪುಟ ವಿಸ್ತರಣೆಗೆ ಚಾಲನೆ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಬಿಜೆಪಿ ಪಕ್ಷದಲ್ಲಿ ಸಚಿವ ಸ್ಥಾನವನ್ನು ಅಲಂಕರಿಸುವ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ಸೂಕ್ತ ಶಾಸಕರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕಳೆದ ಆರು ತಿಂಗಳುಗಳ ಹಿಂದೆ ನಂಜುಂಡಪ್ಪ ವರದಿ ಸಮಿತಿಗೆ ಶಾಸಕ ಸುನೀಲ್ ವಲ್ಯಾಪೂರೆಯವರನ್ನು ನೇಮಕ ಮಾಡಲಾಗಿತ್ತು. ಆದರೆ, ಇಲ್ಲಿಯವರೆಗೆ ಅವರು ಅಧಿಕಾರ ಸ್ವೀಕರಿಸಲು ಹಿಂದೇಟು ಹಾಕಿದ್ದರಿಂದ ಹೊಸಬರನ್ನು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ