ಎಲ್ಲ ಕ್ಷೇತ್ರಗಳ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ಎಸ್‌.ಎಂ.ಕೃಷ್ಣ ಒಲವು

ಗುರುವಾರ, 27 ಮಾರ್ಚ್ 2014 (11:24 IST)
PR
PR
ಬೆಂಗಳೂರು: ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್.ಎಂ. ಕೃಷ್ಣ ಮನೆಗೆ ಪರಮೇಶ್ವರ್, ಸಿಎಂ ಸಿದ್ದರಾಮಯ್ಯ ಮತ್ತು ಜಾರ್ಜ್ ಭೇಟಿ ಕೊಟ್ಟಿದ್ದು, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ರಮ್ಯಾ ಪರ ಪ್ರಚಾರ ನಡೆಸುವಂತೆ ಕೂಡ ಮನವಿ ಮಾಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಉಳಿದಿದ್ದು, ಲೋಕಸಭಾ ಚುನಾವಣೆಯ ಪ್ರಚಾರದ ಕಾರ್ಯತಂತ್ರಗಳು ಮತ್ತು ಯಾವ ಯಾವ ಕ್ಷೇತ್ರಗಳಲ್ಲಿ ಕೃಷ್ಣ ಅವರನ್ನು ಪ್ರಚಾರಕ್ಕೆ ಒಯ್ಯಲು ಸಾಧ್ಯವಾಗುತ್ತದೆ ಎನ್ನುವುದನ್ನು ಚರ್ಚಿಸಲಾಯಿತು. ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತೇನೆ ಎಂದು ಕೃಷ್ಣ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಬಿಜೆಪಿ ಮೋದಿ ಅಲೆಯೆಂಬ ಭ್ರಮೆಯಲ್ಲಿ ಮುಳುಗಿದೆ. ಆದರೆ ಕಾಂಗ್ರೆಸ್ ಮಾಡಿರುವ ಉತ್ತಮ ಕೆಲಸಗಳಿಂದ ಅಧಿಕಾರಕ್ಕೆ ಬರುತ್ತದೆ ಎಂದು ಕೃಷ್ಣ ನುಡಿದರು. ನಿನ್ನೆ ಜಗದೀಶ್ ಶೆಟ್ಟರ್ ಸಿದ್ದರಾಮಯ್ಯ ವಿರುದ್ಧ ರೈತಹಂತಕ ಎಂದು ಬಳಸಿದ ಪದದ ಬಗ್ಗೆ ಸಿಎಂ ಖಾರವಾಗಿ ಮಾತನಾಡಿದರು. ನಾವು ಮೋದಿ ರೀತಿಯಲ್ಲಿ ನರಮೇಧ ನಡೆಸಿಲ್ಲ ಎಂದು ಸಿಎಂ ಪ್ರತಿಕ್ರಿಯಿಸಿದರು.

ವೆಬ್ದುನಿಯಾವನ್ನು ಓದಿ