ಏಪ್ರಿಲ್ 15ರ ನಂತರ ವಿದೇಶ ಪ್ರವಾಸ: ಸದಾನಂದ ಗೌಡ

ಶುಕ್ರವಾರ, 6 ಏಪ್ರಿಲ್ 2012 (19:42 IST)
PR
ಜಾಗತಿಕ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಏಪ್ರಿಲ್ 15ರ ನಂತರ ವಿದೇಶ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ನಗರದ ಅವಿನ್ಯೂ ರಸ್ತೆಯಲ್ಲಿ ಚೌಡೇಶ್ವರಿ ದೇವಿಯ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬರುವ ಜೂನ್‌ನಲ್ಲಿ ನಡೆಯುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ವಿದೇಶಿ ಬಂಡವಾಳಗಾರರನ್ನು ಆಕರ್ಷಿಸುವ ಸಲುವಾಗಿ ಈ ತಿಂಗಳ 15ರ ನಂತರ ಅಮೆರಿಕ ಸೇರಿದಂತೆ ವಿವಿಧ ದೇಶಗಳ ಪ್ರವಾಸ ಕೈಗೊಳ್ಳುವುದಾಗಿ ಹೇಳಿದರು.

ವಿಶ್ವ ಜಾಗತಿಕ ಬಂಡವಾಳ ಸಮಾವೇಶದ ಹಿನ್ನೆಲೆಯಲ್ಲಿ ಈಗಾಗಲೇ ರಾಷ್ಟ್ರದ ಹಲವು ನಗರಗಳಲ್ಲಿ ರೋಡ್ ಶೋಗಳನ್ನು ನಡೆಸಲಾಗಿದೆ. ವಿದೇಶಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ವಿದೇಶ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು.

ತಮ್ಮ ನೇತೃತ್ವದ ರಾಜ್ಯದ ಉನ್ನತ ನಿಯೋಗ ಈ ತಿಂಗಳ 15ರ ನಂತರ ಹಲವು ದೇಶಗಳಲ್ಲಿ ಪ್ರವಾಸ ಕೈಗೊಂಡು ರಾಜ್ಯದಲ್ಲಿ ಬಂಡವಾಳ ಹೂಡಿಕೆ ನಿಟ್ಟಿನಲ್ಲಿ ಹೂಡಿಕೆದಾರರ ಜತೆ ಚರ್ಚೆ ನಡೆಸಲಿದೆ ಎಂದರು.

ವೆಬ್ದುನಿಯಾವನ್ನು ಓದಿ