ಕಾಂಗ್ರೆಸ್‌ನಿಂದ ಮಾತ್ರ ರಾಜ್ಯದ ಅಭಿವೃದ್ದಿ ಸಾಧ್ಯ: ಪ್ರಧಾನಿ ಸಿಂಗ್

ಸೋಮವಾರ, 29 ಏಪ್ರಿಲ್ 2013 (13:01 IST)
PR
PR
ಕಾಂಗ್ರೆಸ್ ಮುಖ್ಯಮಂತ್ರಿಗಳ ಆಳ್ವಿಕೆ ಅವಧಿಯಲ್ಲಿ ವಿಶ್ವವಿಖ್ಯಾತಿ ಪಡೆದಿದ್ದ ಕರ್ನಾಟಕ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ರಂಗಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿರುವ ಕಾರಣ ಅಭಿವೃದ್ದಿ ಕುಂಠಿತವಾಗಿದೆ ಎಂದು ಆರೋಪಿಸಿರುವ ಪ್ರಧಾನಿ ಡಾ. ಮನಮೋಹನ್ ಸಿಂಗ್ ಕಾಂಗ್ರೆಸ್‌ನಿಂದ ಮಾತ್ರ ಅಭಿವೃದ್ದಿ ಸಾಧ್ಯವಾಗಲಿದ್ದು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುವಂತೆ ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮೂವರು ಮುಖ್ಯಮಂತ್ರಿಗಳು ಬದಲಾಗಿದ್ದಾರೆ ಎಂದು ವ್ಯಂಗ್ಯವಾಡಿದರಲ್ಲದೆ ಬಿಜೆಪಿ ಅವಧಿಯಲ್ಲಿ ಭ್ರಷ್ಟಾಚಾರ ಹೆಚ್ಚಳವಾಗಿದ್ದು, ರಾಜ್ಯದಲ್ಲಿ ನೀರು, ವಿದ್ಯುತ್ ಸಮಸ್ಯೆ ದಿನೇ ದಿನೇ ಉಲ್ಬಣಿಸುತ್ತಿದೆ ಎಂದು ಹೇಳಿದರು.

ಭ್ರಷ್ಟಾಚಾರ ಸೇರಿದಂತೆ ವಿವಿಧ ಆರೋಪಗಳನ್ನು ಹೊತ್ತು ಬಿಜೆಪಿಯ ಹಲವು ಸಚಿವರು ರಾಜೀನಾಮೆ ನೀಡಿದ್ದರು ಎಂಬುದಾಗಿ ಹೇಳಿದ ಮನಮೋಹನ್ ಸಿಂಗ್, ಸ್ಥಿರ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಕರೆ ನೀಡಿದರು.

ವೆಬ್ದುನಿಯಾವನ್ನು ಓದಿ