ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ನಂತರ ನಡೆದ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ವೆಂಕಟೇಶ್ ತಮ್ಮ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ನ ಮಹಾದೇವ್ ಅವರನ್ನು 2,088 ಮತಗಳ ಅಂತರದಿಂದ ಪರಾಭವಗೊಳಿಸುವ ಮೂಲಕ ಜಯಶಾಲಿಯಾಗಿದ್ದಾರೆ. ಈ ಫಲಿತಾಂಶದಿಂದಾಗಿ ಸಿದ್ದರಾಮಯ್ಯರ ಪ್ರತಿಷ್ಟೆ ಇನ್ನಷ್ಟು ಹೆಚ್ಚಿದಂತಾಗಿದೆ.
ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಜೆಡಿಎಸ್ನ ಮಹಾದೇವ್ ಐದನೇ ಸುತ್ತಿನ ಮತ ಎಣಿಕೆ ವೇಳೆಗೆ ಹಿನ್ನಡೆ ಸಾಧಿಸಿದ್ದರು. ಅಂತಿಮವಾಗಿ ಕಾಂಗ್ರೆಸ್ನ ಕೆ. ವೆಂಕಟೇಶ್ 60,054 ಮತಗಳನ್ನು ಪಡೆದರೆ ಜೆಡಿಎಸ್ ನ ಮಹಾದೇವ್ 59,957 ಮತಗಳನ್ನು ಗಳಿಸಿದರು.
ಇನ್ನುಳಿದಂತೆ ಬಿಜೆಪಿ, ಕೆಜೆಪಿ ಹಾಗೂ ಬಿಎಸ್ಆರ್ ಪಕ್ಷದ ಅಭ್ಯರ್ಥಿಗಳು ಕನಿಷ್ಟ ಮತಗಳನ್ನು ಗಳಿಸಿದ್ದಾರೆ. ನಾಲ್ಕನೇ ಸ್ಥಾನ ಪಡೆದಿರುವ ಬಿಜೆಪಿ ಅಭ್ಯರ್ಥಿ ಠೇವಣಿಯನ್ನೂ ಕಳೆದುಕೊಂಡಿದ್ದಾರೆ. ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವುದರೊಂದಿಗೆ ಕಾಂಗ್ರೆಸ್ ಶಾಸಕರ ಸಂಖ್ಯೆ 122 ಕ್ಕೇರಿದಂತಾಗಿದೆ.