ಕೋಲಾರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಕೊಲೆಗೆ ಯತ್ನ

ಬುಧವಾರ, 13 ನವೆಂಬರ್ 2013 (14:40 IST)
PR
PR
ಕೋಲಾರ:ಕೋಲಾರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯನ್ನು ಕೊಲೆ ಮಾಡಲು ದುಷ್ಕರ್ಮಿಗಳು ಯತ್ನಿಸಿದ ಘಟನೆ ನಡೆದಿದೆ. ಕೋಲಾದ ಟಮಕದಲ್ಲಿರುವ ದೇವರಾಜ ಅರಸು ಮೆಡಿಕಲ್ ಕಾಲೇಜು ವಿದ್ಯಾರ್ಥಿಯಾದ ಕಾಮೇಶ್ವರ್ ಟಮಕ ಪ್ರದೇಶದಲ್ಲಿ ರೂಂ ಮಾಡಿದ್ದರು. ನಿನ್ನೆ ರಾತ್ರಿ ರೂಂನಿಂದ ಹೊರಬಂದಿದ್ದಾಗ ಈ ದುಷ್ಕೃತ್ಯವೆಸಗಲಾಗಿದೆ.ಕಾಮೇಶ್ವರ್ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು ಮತ್ತು ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ವಿದ್ಯಾರ್ಥಿಯ ಪರಿಸ್ಥಿತಿ ಚಿಂತಾಜನಕವಾಗಿದ್ದು, ಶೇ. 50ರಷ್ಟು ಸುಟ್ಟ ಗಾಯಗಳಾಗಿವೆ.

ಘಟನೆ ನಡೆದ ತಕ್ಷಣ ಕಾಮೇಶ್ವರ್‌ಗೆ ದೇವರಾಜು ಅರಸು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಸೇಂಟ್ ಜಾನ್ಸ್ ಆಸ್ಪತ್ರೆಗೆ ಸೇರಿಸಲಾಯಿತು. ಗಲ್ ಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ